5:09 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ; ಟ್ರಾಫಿಕ್ ಜಾಮ್; ನಿದ್ದೆಗೆಟ್ಟ ಪೊಲೀಸರು

17/09/2023, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೈವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕ ಅತಿಯಾದ ವೇಗದಲ್ಲಿ ಇದ್ದ ಕಾರಣ ಲಾರಿ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಸಂಭವಿಸಿತ್ತು.


ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ. ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು