ಇತ್ತೀಚಿನ ಸುದ್ದಿ
ಬೈಲೂರು ಥೀಮ್ ಪಾರ್ಕ್ ನ ಪರಶುರಾಮ ಮೂರ್ತಿ ನಕಲಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
23/09/2023, 14:46
ಕಾರ್ಕಳ(reporterkarnataka.com): ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಿದ ಪರಶುರಾಮ ಮೂರ್ತಿ ನಕಲಿಯಾಗಿದೆ ಎಂದು
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕಾರ್ಕಳ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಪರಶುರಾಮ ಮೂರ್ತಿ ಬಳಿ ಚಪ್ಪಲಿ ಧರಿಸಿಕೊಂಡು ಆಗಮಿಸಿದ ನಿರ್ಮಿತಿ ಕೆಂದ್ರದ ಅಧಿಕಾರಿ ಸಚಿನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್ .
ಅವರನ್ನು ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡರು.