ಇತ್ತೀಚಿನ ಸುದ್ದಿ
ಬದಿಯಡ್ಕ: ಆಟೋರಿಕ್ಷಾ -ಶಾಲಾ ಬಸ್ ಭೀಕರ ಅಪಘಾತ; 5 ಮಂದಿ ಸ್ಥಳದಲ್ಲಿಯೇ ದಾರುಣ ಸಾವು
26/09/2023, 00:46
ಕಾಸರಗೋಡು(reporterkarnataka.com)::ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ 5 ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.
ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ರಿಕ್ಷಾದ ಡ್ರೈವರ್, ಒಬ್ಬ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಅನತಿ ದೂರದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಮೃತರ ಪರಿಚಯ ಸ್ಥಳದಲ್ಲಿ ಇದ್ದವರಿಗೆ ಮಾಹಿತಿ ಲಭಿಸಿಲ್ಲವಾದ್ದರಿಂದ ಗುರುತು ಪತ್ತೆ ಹಚ್ಚಲು ಗಂಟೆಗಳಷ್ಟು ಕಾಲ ಪರದಾಡಬೇಕಾಯಿತು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.