5:31 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ ಸಾವು; ಸ್ಥಳೀಯರ ಆಕ್ರೋಶ

30/09/2023, 13:02

ಕುಂದಾಪುರ(reporterkarnataka.com): ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ಕಾಲುದಾರಿಯಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ತಗುಲಿ
ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ತೆರಳಿದ್ದ ಗಂಡ ಮಹಾಬಲ ದೇವಾಡಿಗ ಅವರನ್ನು ಹುಡುಕಲು ತೆರಳಿದ್ದ ಪತ್ನಿ ಲಕ್ಷ್ಮೀ ದೇವಾಡಿಗ ಅವರು ತನ್ನ ಗಂಡ ವಿದ್ಯುತ್ ಶಾಕ್ ಗೆ ಒಳಗಾಗಿರುವುದನ್ನು ಕಂಡು ಪತಿಯನ್ನು ರಕ್ಷಿಸಲು ಯತ್ನಿಸಿದಾಗ ತಾನು ಕೂಡ ವಿದ್ಯುತ್ ಪ್ರವಾಹಕ್ಕೆ ಗುರಿಯಾಗಿ ಸಾವನ್ನಪ್ಪಿದ್ದಾರೆ.
ಮೃತ ಮಹಾಬಲ ದೇವಾಡಿಗ ಅವರು ಮನೆಯೊಂದರಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಮಳೆಯ ಅಬ್ಬರದ ನಡುವೆ ಕೆಲಸಕ್ಕೆ ತೆರಳಿದ್ದರು. ಪತಿ ಸಂಜೆಯಾದರೂ ಮನೆಗೆ ಬಾರದೇ ಇರುವುದನ್ನು ಕಂಡು ಪತ್ನಿ ಲಕ್ಷ್ಮೀ ಹುಡುಕಾಟಕ್ಕೆ ತೆರಳಿದ್ದಾರೆ. ಈ ವೇಳೆ ಕಾಲುದಾರಿಯಲ್ಲಿ ತುಂಡರಿಸಿದ ವಿದ್ಯುತ್ ತಂತಿ ತಗುಲಿ ಪತಿ ಬಿದ್ದಿರುವುದನ್ನು ಲಕ್ಷ್ಮೀ ಗಮನಿಸಿದ್ದಾರೆ. ತಕ್ಷಣವೇ ಪತಿಯನ್ನು ರಕ್ಷಿಸಲು ಸ್ಥಳೀಯರಲ್ಲಿ ನೆರವಿಗೆ ಬರುವಂತೆ ಕೂಗಿದ್ದಾರೆ. ಆದರೆ ಸ್ಥಳೀಯರು ಬರುವಷ್ಟರಲ್ಲೇ ಮಳೆ ನೀರಿನಿಂದ ಒದ್ದೆಯಾದ ಮರದ ತುಂಡಲ್ಲಿ ಪತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿ ಲಕ್ಷ್ಮೀ ಪತಿಯ ಸಮೀಪವೇ ಪ್ರಾಣಬಿಟ್ಟಿದ್ದಾರೆ. ಮೃತ ದಂಪತಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಇಂತಹ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಬಲ ದೇವಾಡಿಗ ಅವರು ಸಾವನ್ನಪ್ಪಿದ ಕಾಲು ದಾರಿಯ ಮಧ್ಯೆ ಎರಡು ವಿದ್ಯುತ್ ತಂತಿ ಹಾದು ಹೋಗಿದೆ. ಅನೇಕ ಕಡೆಗಳಲ್ಲಿ ತುಂಡಾದ ತಂತಿಗಳನ್ನು ಮತ್ತೆ ಜೋಡಿಸಲಾಗಿದೆ. ಎರಡು ತಂತಿಯಲ್ಲಿ ಒಂದು ತಂತಿ ತುಂಡಾಗಿ ಬಿದ್ದಿದ್ದು, ಇದೇ ತಂತಿ ತಗುಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕ ಜಯರಾಮ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು