ಇತ್ತೀಚಿನ ಸುದ್ದಿ
ಕಾಂಗ್ರೆಸ್ ಆಮಿಷೆಯೊಡ್ಡಿ ಬಿಜೆಪಿ ಮಾಜಿ ಶಾಸಕರು, ಮುಖಂಡರನ್ನು ಸೆಳೆಯುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ
01/10/2023, 11:47
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ನಮ್ಮ ಮುಖಂಡರು, ಮಾಜಿ ಶಾಸಕರಿಗೆ ಆಮಿಷಯೊಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಕಾಂಗ್ರೆಸ್ ಗಲಿಬಿಲಿಯಲ್ಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅಸುರಕ್ಷತೆ ಕಾಡ್ತಿದೆ. ಅದಕ್ಕೆ ಬಿಜೆಪಿಯಿಂದ ಕರೆದುಕೊಳ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಪ್ರಪಂಚದಲ್ಲಿ ಭಾರತದವನ್ನು ಅಗ್ರಸ್ಥಾನದಲ್ಲಿ ನಿಲ್ಲುಸುವ ಕೆಲಸ ಮಾಡ್ತಿದ್ದಾರೆ. ಮೋದಿ ಜೊತೆ ಕೈ ಜೋಡಿಸಿ, 2024ಕ್ಕೆ ಅತ್ಯಧಿಕ ಮತಗಳ ಅಂತರದಲ್ಲಿ ಮೋದಿ ಗೆಲ್ಲಿಸೋಣ. ಶಾಸಕರು, ಎಂಪಿ ಅಧಿಕಾರ ಇರಬಹುದು-ಇಲ್ಲದಿರಬಹುದು ಆದರೆ, ದೇಶ ಉಳಿಯೋದು ಮುಖ್ಯ. ಹಾಗಾಗಿ, ಎಲ್ಲರಿಗೂ ಪ್ರಾರ್ಥನೆ ಮಾಡ್ತೀನಿ, ಮೋದಿ-ದೇಶಕ್ಕಾಗಿ ಕೆಲಸ ಮಾಡಿ ಎಂದು ಅವರು ನುಡಿದರು.