2:05 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ

03/10/2023, 16:44

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ.
ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ
5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ. ನೇಪಾಳದಲ್ಲಿ ಮೊದಲ ಭೂಕಂಪ ಮಧ್ಯಾಹ್ನ 2:25 ಕ್ಕೆ ಸಂಭವಿಸಿತು, ಎರಡನೆಯದು ಮಧ್ಯಾಹ್ನ 2:51ಕ್ಕೆ ನಡೆಯಿತು.
“ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ದಾಖಲಾಗಿದೆ. ಇದು 5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆ ದೆಹಲಿ ಮತ್ತು ಇತರ ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು