5:52 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಅಬ್ದುಲ್ ಖಾದರ್ ಅವರಿಗೆ ಬೀಳ್ಕೊಡುಗೆ

04/10/2023, 17:42

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿ ವತಿಯಿಂದ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ನಿವೃತ್ತಿ ಹೊಂದಿದ ಅಬ್ದುಲ್ ಖಾದರ್ ಡಿ. ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಸುರತ್ಕಲ್ ಲಯನ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಯಿತು.



ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ತನ್ನ ಸೇವೆಯನ್ನು ಆರಂಭಿಸಿದ ಖಾದರ್ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ 21 ವರ್ಷ ಕರ್ತವ್ಯ ನಿರ್ವಹಿಸಿದ್ದರು.
ಒಟ್ಟು 33 ವರ್ಷಗಳ ಕಾಲ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಸೆ. 30ರಂದು ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಶ ಆನಂದ್ ಎಲ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತರರು ( ಅಭಿವೃದ್ಧಿ ) ಮಹೇಶ್, ಕಾರ್ಯಪಾಲಕ ಅಭಿಯಂತರರಾದ ನರೇಶ್ ಶೆಣೈ, ಗುತ್ತಿಗೆದಾರರಾದ ಎಂ. ಜಿ. ಹುಸೇನ್ ಉಪಸ್ಥಿತರಿದ್ದರು. ಮಹಾನಗರ ಪಾಲಿಕೆಯ ಆಯುಕ್ತರು ಬೀಳ್ಕೊಡುಗೆ ಸಮಾರಂಭ ನಡೆಸಿಕೊಟ್ಟರು. ಕಾರ್ಯಪಾಲಕ ಅಭಿಯಂತರರಾದ ನರೇಶ್ ಅವರು ನೀರಿನ ಸಮಸ್ಯೆ ಹಾಗೂ ಪಚ್ಚನಾಡಿ ಬೆಂಕಿ ಅನಾಹುತದಲ್ಲಿ ಖಾದರ್ ಅವರ ಮುತುವರ್ಜಿ ವಹಿಸಿ ಎಲ್ಲವನ್ನು ಸುಸೂತ್ರವಾಗಿ ನಡೆಸಿಕೊಟ್ಟಿದ್ದನ್ನು ಸ್ಮರಿಸಿದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಖಾದರ್ ಅವರು ತನ್ನ ಸೇವಾ ಅವಧಿಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರನ್ನು ಸ್ಮರಿಸಿದರು.
ಕಾರ್ಯಕ್ರಮವನ್ನು ಯಾದವ ಹೊಸಬೆಟ್ಟು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು