6:27 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ

05/10/2023, 21:47

ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.
ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.
ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ.

ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್‌ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.
ಮುಂದಿನ ದಿನಗಳಲ್ಲಿ ಹನುಮಂತ ದೇವರ ಗುಡಿ, ನಾಗದೇವರ ಬನ, ಪರಿವಾರ ದೈವಗಳ ಗುಡಿಗಳು, ವಸಂತ ಮಂಟಪ ಮೊದಲಾದ ಕಾಮಗಾರಿಗಳು ಶೀಘ್ರ ಪ್ರಾರಂಭಗೊಳ್ಳಲಿದೆ. ವಾಸ್ತು ಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸುಶಿಲ್ಪದ ಕೆಲಸಗಳು ನಡೆಯುತ್ತಿದ್ದು, ಸಂಸದರು, ಶಾಸಕರು, ಮಾಜಿ ಸಚಿವರು, ಹಲ್ಸನಾಡು ಮನೆತನದ ಧನಿಗಳ ಗೌರವಾಧ್ಯಕ್ಷೆಯ ಜೀರ್ಣೋದ್ಧಾರ ಸಮಿತಿಯಲ್ಲಿ ಡಾ.ಎಂ.ಮೋಹನ್ ಆಳ್ವ ಸಂಚಾಲಕರಾಗಿ, ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷರಾಗಿ, ಜಗನ್ನಾಥ ಚೌಟ ಬದಿಗುಡ್ಡೆ ಮಾಣಿ ಕಾರ್ಯಾಧ್ಯಕ್ಷರಾಗಿ ಇತರ ಪದಾಧಿಕಾರಿಗಳು, ಸದಸ್ಯರ ತಂಡ ಜೀರ್ಣೋದ್ಧಾರ ಕಾರ್ಯದ ಯಶಸ್ಸಿನಲ್ಲಿ ಶ್ರಮಿಸುತ್ತಿದೆ.
ಒಂದೆಡೆ ಶಿಲಾಮಯ ದೇವಾಲಯ ನಿರ್ಮಾಣಕ್ಕಾಗಿ ಕಲ್ಲಿನ ಕೆಲಸಗಳು, ದಾರುಶಿಲ್ಪದ ಕೆಲಸಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರತಿನಿತ್ಯವೂ ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಶ್ರಮದಾನ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಕೆಲಸಗಳಿಗೆ ಭಕ್ತರ ಶ್ರಮದಾನ ಸಹಕಾರ ಲಭಿಸಿದ ಪರಿಣಾಮ ಜೀರ್ಣೋದ್ಧಾರ ಕಾರ್ಯಗಳು ಸರಾಗವಾಗಿ ನಡೆದುಕೊಂಡು ಹೋಗುವುದಕ್ಕೆ ಸಹಕಾರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು