5:12 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಚಿಂತನೆ; ಗೌಡ್ರು ಒಪ್ಪಿಕೊಂಡ್ರೆ ಒಂದೆರಡು ದಿನಗಳಲ್ಲಿ ಸಖ್ಯ ಪಕ್ಕಾ

05/10/2023, 10:25

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಎಲ್ಲವೂ ಅಂದುಕೊಂಡಂತೆ ನಡೆದರೆ ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೆರಡು ದಿನಗಳಲ್ಲಿ ಪಕ್ಕಾ ಆಗಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಮೈತ್ರಿ ಸೂತ್ರವನ್ನು ಬಿಜೆಪಿಯು ಜೆಡಿಎಸ್ ಮುಂದಿಟ್ಟಿದೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಮೈತ್ರಿ ಸೂತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರ ಮುಂದಿಟ್ಟಿದ್ದಾರೆ. ದೇವೇಗೌಡರ ತವರು ಜಿಲ್ಲೆಯಾದ ಹಾಸನ ಲೋಕಸಭಾ ಕ್ಷೇತ್ರದ ಜತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಸಿದ್ಧವಾಗಿದೆ. ಬಿಜೆಪಿಯ ಈ ಆಫರನ್ನು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಒಪ್ಪಿಕೊಂಡರೆ ಒಂದೆರಡು ದಿನಗಳಲ್ಲಿ ಉಭಯ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಬೀಳಲಿದೆ. ಕೇವಲ 3 ಕ್ಷೇತ್ರಗಳನ್ನು ಜೆಡಿಎಸ್ ಒಪ್ಪಿಕೊಳ್ಳದಿದ್ದರೆ, ಬಿಜೆಪಿಯು ಜೆಡಿಎಸ್ ಗೆ
ಜೆ.ಪಿ. ನಡ್ಡಾ, ಅಮಿತ್ ಷಾ ಅವರ ಜತೆ ಮತ್ತೊಂದು ಸುತ್ತಿನ ಮಾತುಕತೆಗೆ ಅವಕಾಶ ನೀಡಲಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಹಿನ್ನಡೆ ಕಂಡ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿದೆ. ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ದೇವೇಗೌಡರ ದೆಹಲಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವುದರಿಂದ ಜೆಡಿಎಸ್ ಗೆ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವುದು ಕಷ್ಟಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯಾವುದೇ ತಕರಾರು ಮಾಡದೆ ಬಿಜೆಪಿ ನೀಡುವ 3 ಕ್ಷೇತ್ರಗಳನ್ನು ಒಪ್ಪಿಕೊಂಡು ಮೈತ್ರಿಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು