11:29 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಸ್ಟ್ಯಾಲಿನ್ ಅಲ್ಲ, ಆತನ ಅಪ್ಪನಿಂದಲೂ ಸನಾತನ ಧರ್ಮ ಅಲುಗಾಡಿಸಲು ಸಾಧ್ಯವಿಲ್ಲ: ಮಂಗಳೂರಿನಲ್ಲಿ ಚಕ್ರಮರ್ತಿ ಸೂಲಿಬೆಲೆ

09/10/2023, 23:50

ಮಂಗಳೂರು(reporterkarnataka.com): ಸ್ಟ್ಯಾಲಿನ್ ಅಲ್ಲ ಆತನ ಅಪ್ಪ, ಅಜ್ಜ ಯಾವನೊಬ್ಬನೂ ಪ್ರಯತ್ನಿಸಿದರೂ ಸನಾತನ ಧರ್ಮವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಚಕ್ರಮರ್ತಿ ಸೂಲಿಬೆಲೆ ಹೇಳಿದರು.
ಅವರು ಸೋಮವಾರ ನಗರದ ಕದ್ರಿ ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗ ದಳದ ವತಿಯಿಂದ ನಡೆದ ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಶೋಭಾಯಾತ್ರೆ ಮತ್ತು ಸಾರ್ವಜನಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ತಮಿಳುನಾಡಿನಲ್ಲಿ ಕುಳಿತು ಸನಾತನ ಧರ್ಮವನ್ನು ಕೊರೊನಾಗೆ ಹೋಲಿಸಿದ್ದಾನೆ. ಆತ ಏನಾದರೂ ಮಂಗಳೂರಿನಲ್ಲಿ ಬಂದು ಈ ಮಾತನ್ನು ಹೇಳಿದ್ದರೆ ಆತ ಇಲ್ಲಿಂದ ಜೀವಂತವಾಗಿ ಹೋಗುತ್ತಿರಲಿಲ್ಲ ಎಂದು ಸೂಲಿಬೆಲೆ ಗುಡುಗಿದರು.
ಯುವಕರು ಭಾರತವನ್ನು ಹಿಂದೂ ದೇಶವನ್ನಾಗಿ ಮಾಡಲು ಜಾಗೃತರಾಗಬೇಕು. ಇಲ್ಲವಾದಲ್ಲಿ ಇಸ್ರೇಲ್ ಮಾದರಿಯಲ್ಲಿ ನಮ್ಮ ದೇಶಕ್ಕೂ ದಾಳಿ ನಡೆಯಲಿದೆ. ಜನವರಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಮತ್ತೆ ಭಾರತ ಹಿಂದೂ ಪುನರುತ್ಥಾನ ದಿನವಾಗಲಿದೆ. ಇದರೊಂದಿಗೆ ಯುವಕರು ನಮ್ಮ ಶ್ರದ್ಧಾಕೇಂದ್ರಗಳು ಹಾಗೂ ತಾಯಂದಿರನ್ನು ಉಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.


ವಿಶ್ವ ಹಿಂದೂ ಪರಿಷತ್‌ನ ಸಹ ಸಂಚಾಲಕ ಶರಣ್ ಪಂಪ್‌ವೆಲ್ ಮಾತನಾಡಿ, ರಾಮ ಮಂದಿರ ಉದ್ಘಾಟನಾ ದಿನವನ್ನು ದೇಶದಲ್ಲಿ ಸ್ವಾಭಿಮಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಬೇಕೆಂದು ನಾಯಕರುಗಳಲ್ಲಿ ವಿನಂತಿಸಿಕೊಂಡರು.
ಓಂ ಶ್ರೀ ಶಕ್ತಿಗುರು ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿದರು.
ಭಜರಂಗದಳದ ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ ಪ್ರಾಸ್ತಾವಿಕ ಮಾತನ್ನಾಡಿದರು.
ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲು, ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನಿತಾ, ವಿಹೆಚ್‌ಪಿ ಮಂಗಳೂರು ಸಹ ಸಂಚಾಲಕ ಸುನೀಲ್ ಆಚಾರ್, ವಿಹೆಚ್‌ಪಿ ಮಂಗಳೂ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ, ಪ್ರಮುಖರಾದ ಕೃಷ್ಣಮೂರ್ತಿ, ಮಹಾಬಲೇಶ್ವರ ಹೆಗ್ಡೆ, ಭುಜಂಗ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ಶೌರ್ಯ ಜಾಗರಣ ರಥಯಾತ್ರೆಯ ಸ್ವಾಗತ ಸಮಿತಿಯ ಅಧ್ಯಕ್ಷ ಗಿರಿಧರ್ ಶೆಟ್ಟಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು