ಇತ್ತೀಚಿನ ಸುದ್ದಿ
ಬೆಂಗ್ರೆ; ಮೀನುಗಾರಿಕೆ ಬೋಟ್ ನಲ್ಲಿ ಬೆಂಕಿ ಆಕಸ್ಮಿಕ; ಸಂಪೂರ್ಣ ಅಗ್ನಿಗಾಹುತಿ
10/10/2023, 13:57
ಮಂಗಳೂರು(reporterkarnataka.com): ನಗರದ ಬೆಂಕಿ ಆಕಸ್ಮಿಕಕ್ಕೆ ನಗರದ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ನಡೆದಿದೆ.
ಮಂಗಳವಾರ ಮುಂಜಾನೆ 4.30ಕ್ಕೆ ಈ ದುರ್ಘಟನೆ ನಡೆದಿದ್ಲೆ. ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡದಂತೆ ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.