1:53 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ: ಬಿಪಿನಚಂದ್ರ ಪಾಲ್ ನಕ್ರೆ

11/10/2023, 21:34

ಉಡುಪಿ(reporterkarnataka.com): ಕಾಶ್ಮೀರವಾಗಲಿ, ಪ್ಯಾಲೆಸ್ತೈನ್ ಆಗಲಿ ಅಥವಾ ಅಫಘಾನಿಸ್ತಾನವೇ ಆಗಲಿ ಕಾಂಗ್ರೆಸ್ ಯಾವತ್ತೂ ಮಾನವ ಹಕ್ಕು,ಸ್ವಾಯತ್ತತೆ ಮತ್ತು ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯೊಂದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಕ್ರಿಯಿಸಿದ.
ಇತಿಹಾಸ ಅರಿಯದವರಿಗೆ ವರ್ತಮಾನವು ಕೇವಲ ವಿಪ್ಲವವಾಗಿ ಕಾಣುತ್ತದೆ. ಪ್ಯಾಲೇಸ್ತೈನ್ ಮತ್ತು ಇಸ್ರೇಲ್ ಸಂಘರ್ಷ 60 ವರ್ಷಕ್ಕೂ ಹೆಚ್ಚಿನ ಇತಿಹಾಸವನ್ನು ಹೊಂದಿದೆ. ಫ್ಯಾಲೇಸ್ತೈನಿನ ಸ್ವಾಯತ್ತತೆಯೊಂದಿಗಿನ ಇಸ್ರೇಲಿನ ಸೌಹಾರ್ದಯುತ ರಾಜತಾಂತ್ರಿಕ ಸಂಬಂಧಕ್ಕಾಗಿ, ಗಾಂಧೀಜಿ ಪ್ರತಿಪಾದಿಸಿದ ಅಹಿಂಸಾ ತತ್ವ ಸಿದ್ಧಾಂತದಡಿ ತನ್ನ ಬದುಕನ್ನೆ ಪಣವಿಟ್ಟು ಹೋರಾಡಿದ ಪಿಎಲ್ಒ ನಾಯಕ ದಿ. ಯಾಸರ್ ಅರಾಫತ್ ಹೋರಾಟದ ಐತಿಹಾಸಿಕತೆಯ ನೈಜ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಕಾರ್ಯಕಾರಿಣಿಯಲ್ಲಿ ಪ್ಯಾಲೇಸ್ತೈನಿಯನ್ನರ ಬದುಕಿನ ಕಷ್ಟಕಾಲದಲ್ಲಿ ನಾವಿದ್ದೇವೇ ಎಂದಿದೆ. ಅದರೊಂದಿಗೆ ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿಯನ್ನು ಸ್ಪಷ್ಟ ಶಬ್ದಗಳಿಂದ ಖಂಡಿಸಿದೆ. ಅಷ್ಟಕ್ಕೂ ಅರಬ್ ರಾಷ್ಟ್ರಗಳ ಮುನಿಸಿನ ಪ್ರತಿರೋಧದ ಹೊರತಾಗಿಯೂ ಇಸ್ರೇಲಿನೊಂದಿಗೆ ಭಾರತ ರಾಜತಾಂತ್ರಿಕ ಸಂಬಂಧವನ್ನು ಬೆಳೆಸಿ ರಾಯಭಾರಿಗಳ ನೇಮಕಾತಿ ಮಾಡಿದ್ದೇ ಕಾಂಗ್ರೆಸ್ ಆಡಳಿತದಲ್ಲಿ. ಪ್ರಧಾನಿ ದಿ. ನರಸಿಂಹ ರಾವ್ ಅವಧಿಯಲ್ಲಿ ಎನ್ನುವುದು ಬಹುಶ ಬಿಜೆಪಿ ನಾಯಕರಿಗೆ ತಿಳಿದಿಲ್ಲ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತಾವಧಿಯಲ್ಲಿ ದಿ. ಪ್ರಧಾನಿ ಜವಾಹರಲಾಲ್ ನೆಹರು ವಿಶ್ವ ರಾಜತಾಂತ್ರಿಕತೆಗೆ ಪರಿಚಯಿಸಿದ ಪಂಚಶೀಲ ತತ್ವ, ನಿರ್ಲಿಪ್ತ ಧೋರಣೆಯ ತಳಹದಿಯ ಮೇಲೆ ವಿಶ್ವದ ಶಾಂತಿ ಸೌಹಾರ್ದತೆಗೆ ನೀಡಿದ ಕೊಡುಗೆ ಅಪಾರ. ವಿಶ್ವದ ಎದುರು ಉಗ್ರವಾದದ ವಿರುದ್ಧ ಮಾತಾಡುತ್ತಲೆ ಮನೆಯಲ್ಲಿ ಧರ್ಮದ ಬೇರು ಅಗೆದು ರಾಜಕೀಯ ಮಾಡುವ ಬಿಜೆಪಿಗೆ ಕಾಂಗ್ರೆಸ್ ಪಕ್ಷದ ಉದಾರವಾದದ ಸೃಜನಶೀಲ ರಾಜನೀತಿ ಅರ್ಥ ಆಗಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು