6:14 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ

12/10/2023, 21:27

ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ.
ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಉದ್ಘಾಟಿಸುವರು.ಅಧ್ಯಕ್ಷತೆಯನ್ನು ನಿವೃತ್ತ ಉಪನ್ಯಾಸಕಿ ಹಾಗೂ ಲೇಖಕಿ ಡಾ.ಮೀನಾಕ್ಷಿ ರಾಮಚಂದ್ರ ವಹಿಸುವರು.
ಬಹುಭಾಷಾ ಕವಿಗೋಷ್ಠಿಯಲ್ಲಿ ತುಳುನಾಡಿನ 12 ಭಾಷೆಗಳಲ್ಲಿ ಕವಿತಾ ವಾಚನ ನಡೆಯಲಿದೆ.
ತುಳು, ಕನ್ನಡ, ಬ್ಯಾರಿ, ಅರೆಭಾಷೆ, ಕುಂದ ಕನ್ನಡ, ಹವ್ಯಕ ಕನ್ನಡ , ಶಿವಳ್ಳಿ ತುಳು, ಸ್ಥಾನಿಕ ತುಳು , ಕೊರಗ ಭಾಷೆ, ಜಿ.ಎಸ್. ಬಿ ಕೊಂಕಣಿ , ಕ್ರೈಸ್ತ ಕೊಂಕಣಿ , ಮಳಯಾಲಂ ಭಾಷೆಗಳ ಕವಿಗಳು ಕವಿತೆ ವಾಚಿಸುವರು. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕವಿಗಳು ಈ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು