12:58 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು