11:08 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು?

12/10/2023, 13:39

ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ.
1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.

ಬೆಂಕಿ ರೋಗದ ಹತೋಟಿಗೆ
*TRICYCLAZOLE* ಶಿಲೀಂದ್ರ ನಾಶಕವನ್ನು *0.6 ಗ್ರಾಂ* ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕಾಗಿರುತ್ತದೆ.

2. *ಎಲೆ ಸುರುಳಿ ಹುಳು*:
ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕಾಗಿರುತ್ತದೆ.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕವು ಬಣಕಲ್
ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿರುತ್ತದೆ.
ರೈತರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿ
ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ
ವೆಂಕಟೇಶ್ ಎಂ ಆರ್
(8638162020) ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು