12:07 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ ಬೆಳ್ಳಿಹಬ್ಬ: ಅಕ್ಟೋಬರ್ 13 ಮತ್ತು 14ರಂದು ‘ಮುಲ್ಲರ್ ಮೆಡಿ ಎಕ್ಸ್ಪೋ -2023’

12/10/2023, 19:06

ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯದ ಬೆಳ್ಳಿಹಬ್ಬದ ಅಂಗವಾಗಿ ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರವು ಅಕ್ಟೊಬರ್ 13 ಮತ್ತು 14ರಂದು ಎರಡು ದಿನಗಳ ವಸ್ತು ಪ್ರದರ್ಶನ ಏರ್ಪಡಿಸಿದೆ.
ವಸ್ತು ಪ್ರದರ್ಶನದಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಸಂಶೋಧನಾ ಯೋಜನೆಗಳು ಮತ್ತು ಮಾದರಿಗಳ ಪ್ರಸ್ತುತಿಯ ಸ್ಪರ್ಧೆ ಇದೆ. ಆರೋಗ್ಯದ ಬಗ್ಗೆ ಧನಾತ್ಮಕ ಪ್ರಚಾರ , ಆಹಾರ ಮತ್ತು ಪೌಷ್ಟಿಕತೆ, ಜಲ ಮತ್ತು ನೈರ್ಮಲ್ಯ ,ವೈದ್ಯಕೀಯ ಉಪಕರಣಗಳು, ಪರಿಸರ ಮಾಲಿನ್ಯ ಈ ವಿಷಯಗಳಲ್ಲಿ ಅತ್ತ್ಯುತ್ತಮ ಪ್ರಸ್ತುತಿಗಳಿಗೆ ಬಹುಮಾನಗಳಿವೆ. ವಿವಿಧ ಶಾಲಾ ಕಾಲೇಜುಗಳ 131
ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ. 6ನೇ ತರಗತಿಯಿಂದ 8ನೇ ತರಗತಿ, 9ರಿಂದ 12, ಡಿಪ್ಲೋಮ ಮತ್ತು ವೃತ್ತಿಪರ ಶಿಕ್ಷಣ ಹೀಗೆ ಮೂರೂ ವಿಭಾಗಗಳಲ್ಲಿ ಪ್ರತ್ಯೇಕವಾಗಿ ವಿಜೇತರನ್ನು ನಿರ್ಧರಿಸಲಾಗುತ್ತದೆ.


ಇದರ ಜೊತೆಗೆ ಫಾದರ್ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಭಾಗವಹಿಸುವಿಕೆಯಲ್ಲಿ ವಿವಿಧ ಮಾದರಿಗಳನ್ನು ಒಳಗೊಂಡ ವಸ್ತು ಪ್ರದರ್ಶನ ನಡೆಯಲಿದೆ. ಅಲ್ಲದೇ, ಸಾರ್ವಜನಿಕರಿಗಾಗಿ ಅರೋಗ್ಯ ತಪಾಸಣಾ ವ್ಯವಸ್ಥೆಯು ಇರಲಿದೆ.
ಈ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇದೆ. ಮಕ್ಕಳು ಮತ್ತು ಎಲ್ಲಾ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದೇ ವಸ್ತುಪ್ರದರ್ಶನದ ಮುಖ್ಯ ಉದ್ದೇಶವಾಗಿದೆ.
ಅಕ್ಟೊಬರ್ 13 ರಂದು 10 ಗಂಟೆಗೆ ಈ ಕಾರ್ಯಕ್ರಮಗಳ ಉದ್ಘಾಟನೆ ನಡೆಯುತ್ತದೆ. ಎನ್ ಐ ಟಿ ಕೆ ಸುರತ್ಕಲ್ ಇದರ ಸಂಶೋಧನಾ ನಿರ್ದೇಶಕರಾದ ಡಾ. ಸತ್ಯಬೋಧ್ ಕುಲಕರ್ಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾ. ರಿಚರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆಗಳ ಆಡಳಿತಾಧಿಕಾರಿಗಳು, ಆಡಳಿತ ಮಂಡಳಿಯ ಸದಸ್ಯರು , ಸಂಸ್ಥೆಗಳ ಮುಖ್ಯಸ್ಥರು , ಶಿಕ್ಷಕರು , ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ .
ಫಾದರ್ ಮುಲ್ಲರ್ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸಂಜೀವ ರೈ ಅವರ ಸಂಯೋಜನೆಯಲ್ಲಿ ನಡೆಯುವ ಎರಡು ದಿನಗಳ ಈ ವಿಜ್ಞಾನ ಹಬ್ಬಕ್ಕೆ ಎಲ್ಲರಿಗೂ ಸ್ವಾಗತವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು