7:54 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ

17/10/2023, 10:08

ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ.
ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಹಿಂದುತ್ವ ಉಳಿಸಿ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.
ಕಾರ್ಕಳ ಬೈಲೂರುನಲ್ಲಿ ನಿರ್ಮಾಣಗೊಂಡು ಶಾಸಕ ಸುನಿಲ್ ಕುಮಾರ್ ಅವರಿಂದ ಅಪಚಾರಕ್ಕೊಳಗಾದ ಕರಾವಳಿ ಸೃಷ್ಟಿಕರ್ತ ಪರಶುರಾಮರ ಹೊಸ ಮೂರ್ತಿಯನ್ನು ಸರಕಾರ ಶಾಸ್ತ್ರ ಪೂರ್ವಕವಾಗಿ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಧರ್ಮ ಉಳಿಸಲಿ ಎಂದು ಹೆಗ್ಡೆ ತಿಳಿಸಿದ್ದಾರೆ.
ಪರಶು ರಾಮರು ವಿಷ್ಣುವಿನ ಅವತಾರವೆತ್ತವರು. ಕಾರ್ಕಳದಲ್ಲಿ ಅಂತಹ ಪುಣ್ಯ ಪುರುಷರ ಮೂರ್ತಿ ಕಾರ್ಕಳದಲ್ಲಿ ನಿರ್ಮಾಣ ಕಂಡಾಗ ಹಿಂದೂ ಧರ್ಮದ ಎಲ್ಲರೂ ಸಂತಸ ಪಟ್ಟಿದ್ದರು.
ಎಲ್ಲಾ ಹಿಂದೂ ಸಂಘಟನೆಗಳು ಕೂಡ ಈ ವಿಚಾರ ಬಂದಾಗ ಸಂತಸ ಪಟ್ಟಿದ್ದರು. ಹೆಮ್ಮೆ ಪಟ್ಟಿದ್ದರು. ಆದರೆ ಈ ಮೂರ್ತಿಯನ್ನು ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಕೊಂಡು ಬಂದವರು ನಕಲಿ ಮಾಡುತ್ತಾರೆ ಎಂದು ಕನಸಲ್ಲಿ ಕೂಡ ಎಣಿಸಿರಲಿಲ್ಲ ಎಂದು ಅವರು
ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿದೆ. ಇಂತಹ ಸಂತಸದ ದಿನಗಳಲ್ಲಿ ಕರಾವಳಿಯ ಸೃಷ್ಟಿ ಕರ್ತನ ಮೂರ್ತಿಯನ್ನೇ ನಕಲಿ ಮಾಡಿರುವುದು ಹಿಂದುತ್ವಕ್ಕೆ ಮಾಡಿದ ದ್ರೋಹ. ಹಿಂದುತ್ವಕ್ಕೆ ಯಾರೇ ದ್ರೋಹ ಮಾಡಿದರು ಕ್ಷಮೆ ಇಲ್ಲ. ಅದು ಭಯೋತ್ಪಾದನೆಗೆ ಸಮಾನ.
ಈ ದ್ರೋಹದಲ್ಲಿ ಸುನಿಲ್ ಕುಮಾರ್ ಅವರ ನೇರ ಪಾತ್ರ ಇರುವುದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವಂತೆ ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಶ್ಚಂದ್ರ ಹೆಗ್ಡೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು