7:08 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ

17/10/2023, 14:39

ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.


ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೃಹತ್ ಕಂಪನಿಗಳು ಬಂದರೆ ಸಹಜವಾಗಿ ಉದ್ಯೋಗ ಸಿಗುವ ಆಕಾಂಕ್ಷೆ ಸಹಜವಾಗಿ ಇರುತ್ತದೆ. ಆದರೆ ಸ್ಥಳೀಯರಿಗೆ ಉದ್ಯೋಗದಲ್ಲಾಗಲಿ, ವೇತನದಲ್ಲಾಗಲಿ ತಾರತಮ್ಯ ಮಾಡಬಾರದು. ಎಂಆರ್‍ಪಿಎಲ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲು ತಾನು ಶಾಸಕ ಉಮಾನಾಥ ಕೊಟ್ಯಾನ್ ಅವರೊಂದಿಗೆ ಜತೆಯಾಗಲಿದ್ದೇನೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈಶ್ವರ್ ಕಟೀಲ್, ಸ್ಥಳೀಯ ಮನಪಾ ಸದಸ್ಯೆ ಸರಿತಾ ಶಶಿಧರ್, ಜಯಂತ್ ತೋಕೂರು,ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು