9:33 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ

18/10/2023, 16:16

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಐತಿಹಾಸಿಕ ನಡೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.




ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕನ್ನಡ ಸಂಸ್ಕøತಿ ಇಲಾಖೆ, ಅಂಚೆ ಇಲಾಖೆ,ಲೀಡ್ ಬ್ಯಾಂಕ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಮೇರಿ ಮಾಟಿ ಮೇರಾ ದೇಶ್ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆ ಯ ಸಮಾರೋಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾತೃಭೂಮಿ ಎಂದು ಬಂದಾಗ ನಾವೆಲ್ಲಾ ಸಮರ್ಪಣಾ ಮನೋಭಾವ ಹೊಂದ ಬೇಕು.ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರು, ನಮ್ಮನ್ನು ಕಾಪಾಡುವಲ್ಲಿ ಬಲಿದಾನವನ್ನು ಮಾಡಿದ ವೀರ ಯೋಧರ ಸ್ಮರಣೆಯಲ್ಲಿ ರಾಜಧಾನಿಯಲ್ಲಿ ಉದ್ಯಾನವನ ನಿರ್ಮಾಣ ಆ ಮೂಲಕ ನಮ್ಮ ಮುಂದಿನ ಪೀಳಿಗೆಯಲ್ಲಿ ಸದಾ ಜಾಗೃತಿ ಮನಸ್ಥಿತಿಯನ್ನು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ನೆಹರು ಯುವ ಕೇಂದ್ರದ ಜಗದೀಶ್, ಅಂಚೆ ಇಲಾಖೆಯ ಅಧಿಕಾರಿಗಳಾದ ಶಂಕರ್, ಆಡಳಿತಾಧಿಕಾರಿ ತಾಲೂಕು ಪಂಚಾಯತ್ ರವಿಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖರಾದ ನಾಗರತ್ನ, ಉದಯ್ ಕುಮಾರ್. ತಾಲೂಕು ಪಂಚಾಯತ್ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು