12:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ

21/10/2023, 22:08

ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದುಗೂಡಿಸುವ ಒಂದು ಸಣ್ಣ ಪ್ರಯತ್ನದ ಭಾಗವಾಗಿ ಈ ಬಾರಿಯ ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ “ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು” ಎಂಬ ಕಣ್ಣೋಟದಿಂದ ಅಳವಡಿಸುವ ಟ್ಯಾಬ್ಲೋವನ್ನು ದಸರಾ ಮೆರವಣಿಗೆಯಲ್ಲಿ ಪ್ರದರ್ಶಿಸಿ ಮಂಗಳೂರಿನ ಅಭಿವೃದ್ಧಿಯಲ್ಲಿ ಸರ್ವ ಧರ್ಮದ ಜನರ ಕೊಡುಗೆಗಳನ್ನು ಸಮಾಜಕ್ಕೆ ನೆನಪಿಸುವ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ತಬ್ದಚಿತ್ರವನ್ನು ದ.ಕ‌.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ(ರಿ), ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಭಗತ್ ಸಿಂಗ್ ವಾರಿಯರ್ಸ್‌ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಅಯೋಜಿಸಲಾಗಿದ್ದು, ಇದರ ಯಶಸ್ವಿಗೆ ಸರ್ವ ಧರ್ಮದ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು