ಇತ್ತೀಚಿನ ಸುದ್ದಿ
ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ
21/10/2023, 22:08
ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದುಗೂಡಿಸುವ ಒಂದು ಸಣ್ಣ ಪ್ರಯತ್ನದ ಭಾಗವಾಗಿ ಈ ಬಾರಿಯ ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ “ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು” ಎಂಬ ಕಣ್ಣೋಟದಿಂದ ಅಳವಡಿಸುವ ಟ್ಯಾಬ್ಲೋವನ್ನು ದಸರಾ ಮೆರವಣಿಗೆಯಲ್ಲಿ ಪ್ರದರ್ಶಿಸಿ ಮಂಗಳೂರಿನ ಅಭಿವೃದ್ಧಿಯಲ್ಲಿ ಸರ್ವ ಧರ್ಮದ ಜನರ ಕೊಡುಗೆಗಳನ್ನು ಸಮಾಜಕ್ಕೆ ನೆನಪಿಸುವ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ತಬ್ದಚಿತ್ರವನ್ನು ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ(ರಿ), ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಭಗತ್ ಸಿಂಗ್ ವಾರಿಯರ್ಸ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಅಯೋಜಿಸಲಾಗಿದ್ದು, ಇದರ ಯಶಸ್ವಿಗೆ ಸರ್ವ ಧರ್ಮದ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.