12:34 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು