7:08 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು: ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ನಾಳೆ ವಾಕಥಾನ್; 5 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ; ಸಂಚಾರ ಬದಲಾವಣೆ

31/10/2023, 21:09

ಮಂಗಳೂರು(reporterkarnataka.com): 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ಸಂಜೆ 4 ಗಂಟೆಗೆ ನಡೆಯಲಿದೆ.
ವಾಕಥಾನ್ ನಲ್ಲಿ 120ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್ ರಸ್ತೆ, ನವಭಾರತ ವೃತ್ತ, ಪಿವಿಎಸ್, ಲಾಲ್‌ಭಾಗ್, ಲೇಡಿಹಿಲ್, ನಾರಾಯಣ ಗುರು ವೃತ್ತ ಮುಖಾಂತರ ಮಂಗಳ ಕ್ರೀಡಾಂಗಣ ತಲುಪಲಿದೆ. ಈ ಸಂಬಂಧ ನಗರದಲ್ಲಿ ಮಾಡಲಾಗಿರುವ ವಾಹನ ಸಂಚಾರ ನಿಷೇಧ, ಮಾರ್ಪಾಡು ಹಾಗೂ ವಾಹನ ನಿಲುಗಡೆ ನಿಷೇಧದ ವಿವರ ಈ ಕೆಳಗಿನಂತಿದೆ.
ವಾಹನ ಸಂಚಾರ ನಿಷೇಧ ಹಾಗೂ ಮಾರ್ಪಾಡು ವಿವರ:

1.ಮಂಗಳೂರು ನಗರ ಸಿಟಿ ಮತ್ತು ಸರ್ವಿಸ್ ಬಸ್ಸು ನಿಲ್ದಾಣದ ಕಡೆಯಿಂದ ಕ್ಲಾಕ್ ಟವರ್ ಕಡೆಗಿನ ರಸ್ತೆಯಲ್ಲಿ ಮೆರವಣಿಗೆಯು ಪುರಭವನದ ದಕ್ಷಿಣ ದ್ವಾರದಿಂದ ಕ್ಲಾಕ್ ಟವರ್ ವೃತ್ತ ತಲುಪುವ ಸಮಯದ ವರೆಗೆ ವಾಹನ ಸಂಚಾರವನ್ನು ನಿಷೇಧಿಸಿದೆ.

2.ಸೆಂಟ್ರಲ್ ಮಾರ್ಕೆಟ್‌ನ ಫಾತಿಮಾ store ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿದೆ.

3.ಮೆರವಣಿಗೆಯು ಕ್ಲಾಕ್ ಟವರ್ ತಲುಪಿದ ತಕ್ಷಣ ಸಿಟಿ ಹಾಗೂ ಸರ್ವಿಸ್ ಬಸ್ಸು ನಿಲ್ದಾಣ ಕಡೆಯಿಂದ ಬರುವ ವಾಹನಗಳು ಕ್ಲಾಕ್ ಟವರ್ ನ ಬಳಿ ಬಲಕ್ಕೆ ತಿರುಗಿ ಹಂಪನಕಟ್ಟ – ಕ್ಲಾಕ್‌ಟವರ್ ರಸ್ತೆಯಲ್ಲಿ ಏಕ ಮುಖ ಸಂಚಾರಕ್ಕೆ ವಿರುದ್ಧವಾಗಿ ಹಂಪನಕಟ್ಟ ಜಂಕ್ಷನ ತನಕ ಸಂಚರಿಸಿ ನಂತರ ಎಡಕ್ಕೆ ತಿರುಗಿ ಎಲ್.ಹೆಚ್.ಹೆಚ್ ರಸ್ತೆ ಮುಖಾಂತರ ಮುಂದುವರಿಯುವುದು.

4.ಅಂಬೇಡ್ಕರ್ ವೃತ್ತದ ಕಡೆಯಿಂದ ಎಲ್.ಹೆಚ್.ಹೆಚ್ ಮೂಲಕ ಸಿಟಿ & ಸರ್ವಿಸ್ ಬಸ್ಸು ನಿಲ್ದಾಣ ಹಾಗೂ ನೆಹರೂ ಮೈದಾನದ ಕಡೆಗೆ ಬರುವ ಎಲ್ಲಾ ತರಹದ ವಾಹನಗಳು ಹಂಪನಕಟ್ಟ ಜಂಕ್ಷನ್ ಬಳಿ ಎಡಕ್ಕೆ ತಿರುಗಿ ರೈಲ್ವೇ ನಿಲ್ದಾಣದ ರಸ್ತೆಯ ಮುಖಾಂತರ ಯು.ಪಿ. ಮಲ್ಯ ರಸ್ತೆಗೆ ಬಂದು ಮುಂದುವರಿಯುವುದು.

5.ಪಿ.ಎಂ ರಾವ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನ ಸಂಚಾರ ನಿಷೇದಿಸಿದೆ.

6.ಶರವು ಗಣಪತಿ ದೇವಸ್ಥಾನ ರಸ್ತೆಯಲ್ಲಿ ಎಲ್ಲಾ ತರಹದ ವಾಹನ ಸಂಚಾರ ನಿಷೇದಿಸಿದೆ.

7.ಕಾರ್‌ಸ್ಟ್ರೀಟ್ ಕಡೆಯಿಂದ ಅಂಬೇಡ್ಕರ್ ವೃತ್ತದ ಕಡೆಗೆ ಹೋಗುವ ಎಲ್ಲಾ ವಾಹನಗಳು ನವಭಾರತ ವೃತ್ತ ಹಾಗೂ ಯೆನಪೋಯ ಆಸ್ಪತ್ರೆಯ ಬಳಿಯ ವಿ.ಟಿ ರಸ್ತೆ (ಕರ್ನಾಟಕ ಬ್ಯಾಂಕ್) ಮೂಲಕ ಕೆ.ಎಸ್.ರಾವ್ ರಸ್ತೆಗೆ ಬಂದು ಕೋರ್ಟ್ ರಸ್ತೆ ಅಥವಾ ಸಿಟಿ ಸೆಂಟರ್ ರಸ್ತೆಯಾಗಿ ಮುಂದುವರಿಯುವುದು.

8.ಬಂಟ್ಸ್ ಹಾಸ್ಟೆಲ್ / ಕರಂಗಲಪಾಡಿ ಕಡೆಯಿಂದ ಪಿ.ವಿ.ಎಸ್ ಕಡೆಗೆ ಎಲ್ಲಾ ತರಹದ ವಾಹನಗಳ ಸಂಚಾರ ನಿಷೇಧಿಸಿದೆ. ಅಂಬೇಡ್ಕರ್ ವೃತ್ತದಿಂದ ಲಾಲ್‌ಬಾಗ್ ಕಡೆಗೆ ಹೋಗುವ ವಾಹನಗಳು ಕರಂಗಲಪಾಡಿ ರಸ್ತೆ ಹಾಗೂ ಅಂಬೇಡ್ಕರ್ ವೃತ್ತದಿಂದ ಕೆ.ಪಿ.ಟಿ ಕಡೆಗೆ ಹೋಗುವ ವಾಹನಗಳು ಕದ್ರಿ ಕಂಬಳ ರಸ್ತೆ ಮುಖಾಂತರ ಸಂಚರಿಸುವುದು.

9.ಕುದ್ರೋಳಿ ಕಡೆಯಿಂದ ಎಂ.ಜಿ. ರಸ್ತೆ ಕಡೆಗೆ ಬರುವ ಎಲ್ಲಾ ವಾಹನಗಳು ಮಣ್ಣಗುಡ್ಡೆ – ಸಂಘನಿಕೇತನ ರಸ್ತೆ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)ಕ್ಕೆ ಹೋಗಿ ಎಂ.ಜಿ ರಸ್ತೆ ಪ್ರವೇಶಿಸುವುದು.

10.ಕೆ.ಎಸ್.ಆರ್.ಟಿ.ಸಿ ಜಂಕ್ಷನ್‌ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಸದರಿ ವಾಹನಗಳು ಬಿಜೈ ಕಾಪಿಕಾಡ್ ಕಡೆಯಿಂದ ಕೊಟ್ಟಾರ ಕ್ರಾಸ್ ಮುಖೇನ ಸಂಚರಿಸುವುದು.

11.ನಾರಾಯಣ ಗುರು ವೃತ್ತ (ಲೇಡಿಹಿಲ್) ಹಾಗೂ ಮಣ್ಣಗುಡ್ಡೆ ರಸ್ತೆಯ ನಡುವಿನ ವಾಹನ ಸಂಚಾರವನ್ನು ನಿಷೇಧಿಸಿದೆ.

12.ಕುದ್ರೋಳಿ ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಈ ಕೆಳಕಂಡ ರಸ್ತೆಗಳಲ್ಲಿ ಬಂದು ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
*ಪಿ.ವಿ.ಎಸ್ ಕಲಾಕುಂಜ ರಸ್ತೆ *ಕೋಡಿಯಾಲ್ ಗುತ್ತು ರಸ್ತೆ *ಟಿ.ಎಂ.ಎ ಪೈ ರಸ್ತೆ ಜಿ.ಜಿ ರಸ್ತೆ (ಪತ್ತು ಮುಡಿ ರಸ್ತೆ) *ಮಣ್ಣಗುಡ್ಡೆ ರಸ್ತೆ (ಬಲ್ಲಾಳ್‌ಬಾಗ್)
*ನೆಹರು ಅವೆನ್ಯೂ ರಸ್ತೆ
*ನೆಹರು ಅವೆನ್ಯೂ ಕ್ರಾಸ್ ರಸ್ತೆ (ಪಬ್ಬಾಸ್‌ನ ಬಳಿ)
ವಾಹನ ನಿಲುಗಡೆ ನಿಷೇಧಿಸಿರುವ ಸ್ಥಳಗಳು:

1) ಮೆರವಣಿಗೆ ಸಾಗುವ ಪುರಭವನ – ಕ್ಲಾಕ್‌ಟವರ್ – ಕೆ.ಬಿ.ಕಟ್ಟೆ – ಹಂಪನಕಟ್ಟ – ಕೆ.ಎಸ್.ಅರ್ ರಾವ್ ರಸ್ತೆ – ನವಭಾರತ ವೃತ್ತ – ಪಿ.ವಿ.ಎಸ್ ವೃತ್ತ – ಎಂ.ಜಿ ರಸ್ತೆ (ಪಿ.ವಿ.ಎಸ್ ನಿಂದ ನಾರಾಯಣ ಗುರು ವೃತ್ತ) – ಮಂಗಳ ಕ್ರೀಡಾಂಗಣ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇದಿಸಿದೆ.

2) ನಾರಾಯಣ ಗುರು ವೃತ್ತ (ಲೇಡಿಹಿಲ್) ದಿಂದ ಮಣ್ಣಗುಡ್ಡದ ವರೆಗಿನ ಕೂಳೂರು ಫೆರ್ರಿ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇದಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು