9:22 AM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿ: ನಿಟ್ಟೆ ಕಾಲೇಜಿಗೆ ಅವಳಿ ಪ್ರಶಸ್ತಿ

10/11/2023, 15:32

ಕಾರ್ಕಳ(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಇತ್ತೀಚೆಗೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಕಾಲೇಜಿನ ಆಶ್ರಯದಲ್ಲಿ ಜರುಗಿತು. ಈ ಪಂದ್ಯಾವಳಿಯಲ್ಲಿ ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗದಲ್ಲಿ ಅತಿಥೇಯ ನಿಟ್ಟೆ ಕಾಲೇಜಿನ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪುರುಷರ ವಿಭಾಗದಲ್ಲಿ ಅತಿಥೇಯ ತಂಡ ಚಾಂಪಿಯನ್ ಆದರೆ ಎಸ್. ಡಿ. ಎಂ‌. ಉಜಿರೆ ಕಾಲೇಜಿನ ತಂಡ ದ್ವಿತೀಯ, ಸಂತ ಅಲೋಶಿಯಸ್ ತೃತೀಯ ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡ ಚತುರ್ಥ ಸ್ಥಾನವನ್ನು ಪಡೆಯಿತು. ಪುರುಷರ ವಿಭಾಗದಲ್ಲಿ ನಿಟ್ಟೆ ಪ್ರಥಮ ದರ್ಜೆ ಕಾಲೇಜಿನ ಸಲ್ಮಾನ್ ಬೆಸ್ಟ್ ಶೂಟರ್, ಬೆಸ್ಟ್ ಡಿಫೆಂಡರ್ ಆಗಿ ಎಸ್.ಡಿ.ಎಂ. ಕಾಲೇಜಿನ ಸುಗುನ್ ಹಾಗೂ ಮೊಸ್ಟ್ ವ್ಯಾಲ್ಯೂಯೆಬಲ್ ಕ್ರೀಡಾಪಟು ಆಗಿ ನಿಟ್ಟೆ ಕಾಲೇಜಿನ ಸಾಗರ್ ಎಸ್. ಕೆ. ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಅತಿಥೇಯ ಕಾಲೇಜಿನ ರಹಿಯಾನ್ ಹಾಗೂ ಅನ್ಸನ್ ಇವರ ಆಟ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು.
ಮಹಿಳಾ ವಿಭಾಗದಲ್ಲಿ ಅತಿಥೇಯ ನಿಟ್ಟೆ ಕಾಲೇಜಿನ ತಂಡ ಚಾಂಪಿಯನ್ ಆದರೆ ಎಸ್.ಡಿ.ಎಂ. ಉಜಿರೆ ದ್ವಿತೀಯ, ಆಳ್ವಾಸ್ ಕಾಲೇಜು ತೃತೀಯ ಹಾಗೂ ಡಾ. ಜಿ. ಶಂಕರ ಮಹಿಳಾ ಕಾಲೇಜು ಚತುರ್ಥ ಬಹುಮಾನ ಪಡೆಯಿತು. ಅತಿಥೇಯ ನಿಟ್ಟೆ ಕಾಲೇಜಿನ ಹರಿಣಿ ಎಂ. ಎಸ್. ಬೆಸ್ಟ್ ಶೂಟರ್, ಬೆಸ್ಟ್ ಡಿಫೆಂಡರ್ ಆಗಿ ಎಸ್.ಡಿ.ಎಂ. ಉಜಿರೆಯ ನೀಕ್ಷಿತಾ ಹಾಗೂ ಮೊಸ್ಟ್ ವ್ಯಾಲ್ಯೂಯೆಬಲ್ ಕ್ರೀಡಾಪಟು ಪ್ರಶಸ್ತಿಯನ್ನು ನಿಟ್ಟೆ ಕಾಲೇಜಿನ ದಿವ್ಯಾ ಬಿ. ಎಸ್. ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು.
ಈ ಪ್ರತಿಷ್ಠಿತ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲೂಣ್ಕರ್ ಉದ್ಘಾಟಿಸಿದರೆ, ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕ್ಯಾಂಪಸ್ ಅಭಿವೃದ್ಧಿ ನಿರ್ದೇಶಕ ಯೋಗೀಶ್ ಹೆಗ್ಡೆ ಭಾಗವಹಿಸಿ ಪಂದ್ಯಾವಳಿಗೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿಟ್ಟೆಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿ. ಕೆ. ವಹಿಸಿದ್ದು, ಸಂಸ್ಥೆಯ ಕ್ರೀಡಾ ಆಡಳಿತಾಧಿಕಾರಿ ಶ್ಯಾಂ ಸುಂದರ್, ಬಾಸ್ಕೆಟ್ ಬಾಲ್ ತರಬೇತುದಾರ ರವಿಪ್ರಕಾಶ್ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ನಿತಿನ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಡಾ.ಜಾನ್ ಪಿಂಟೊ, ವಿಶ್ವವಿದ್ಯಾಲಯ ಪ್ರತಿನಿಧಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಸಹ ನಿರ್ದೇಶಕರು ಡಾ. ಹರಿದಾಸ್ ಕೂಳೂರು ಉಪಸ್ಥಿತರಿದ್ದು ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು