5:34 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ

15/11/2023, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತ ಯುವಕನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಚೇರ್ ಕೆಳಗೆ ಪಟಾಕಿ ಇಟ್ಟುಕೊಂಡು ಯುವಕ ಕೂತಿದ್ದ. ಪಟಾಕಿ ಸಿಡಿದ ರಭಸಕ್ಕೆ ಯುವಕ ನೆಲದಿಂದ 5 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದ. ಕಲ್ಲು ಆಟಂಬಾಂಬ್ ಪಟಾಕಿಯನ್ನು ಚೇರ್ ಕೆಳಗೆ ಇಟ್ಟುಕೊಂಡು ಪ್ರದೀಪ್ ಕುಳಿತಿದ್ದ. ಪಟಾಕಿ ಕಿಡಿ ತಾಗಿ ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿಗಳು ಬ್ಲಾಸ್ಟ್ ಆಗಿವೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಗಾಯಗಳಾಗಿ ಪ್ರದೀಪ್ ಮೃತಪಟ್ಟಿದ್ದಾರೆ.
ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿವೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು