5:36 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಗೋವಿನತೋಟ: ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವಕ್ಕೆ ಚಾಲನೆ; ನಾರಾಯಣ ಕವಚ ಯಾಗ

16/11/2023, 12:39

ಬಂಟ್ವಾಳ(reporterkarnataka.com): ಎಲ್ಲಾ ದೇವತೆಗಳ ಸನ್ನಿಧಾನ ಗೋವಿನಲ್ಲಿದೆ.ಗೋವಿನ ರಕ್ಷಣೆ ಮಾಡುವುದರಿಂದ ಸದ್ಬುದ್ಧಿ ಸಿಗುತ್ತದೆ. ಗೋ ಎಂದರೆ ವೇದ, ಸೂರ್ಯ ಕಿರಣ. ಆದ್ದರಿಂದ ಇನ್ನು ಒಂಭತ್ತು ದಿನಗಳ ಕಾಲ ಈ ಕಾರ್ಯಕ್ರಮದಲ್ಲಿ ಗೋವಿನ ಬಗ್ಗೆ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡೋಣ. ಭಗವಂತನ ಅನುಗ್ರಹದಿಂದ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಗೋವಿನಿಂದ ಬಂದ ಪ್ರಸಾದ ಸ್ವೀಕರಿಸಿದರೆ ಗೋಪಾಲ ಕೃಷ್ಣ ರಕ್ಷಣೆ ಮಾಡುತ್ತಾನೆ ಎಂದು ಅದಮಾರು ಮಠದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದಂಗಳರವರು ಹೇಳಿದರು.

ಅವರು ರಾಧಾ ಸುರಭಿ ಗೋ ಮಂದಿರ ಗೋವಿನತೋಟದಲ್ಲಿ ನಡೆಯುವ ದಕ್ಷಿಣ ಭಾರತದಲ್ಲಿಯೇ ಪ್ರಥಮ ಅಷ್ಟೋತ್ತರ ಶತ (108) ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಾಗ,1108 ನಾರಾಯಣ ಕವಚ ಯಾಗ ಮತ್ತು ಗೋ ನವರಾತ್ರಿ ಉತ್ಸವವಕ್ಜೆ ಚಾಲನೆ ನೀಡಿ ಮಾತನಾಡಿದರು.
ಫರಂಗಿಪೇಟೆ ಶ್ರೀ ವರದೇಶ್ವರ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯ ಮೂಲಕ ಗೋ ಮಂದಿರಕ್ಕೆ ಸಾಗಿ ಬಂತು. ಶೋಭಯಾತ್ರೆಯಲ್ಲಿ ಚೆಂಡೆ, ವಾದ್ಯ,ಗೊಂಬೆ, ಕುಣಿತ ಭಜನೆ,108 ಗೋಪಾಲ ಕೃಷ್ಣರು,108 ಕಲಶದೊಂದಿಗೆ ಮಾತೆಯರು, ಸ್ಥಬ್ದಚಿತ್ರ,ಮೆರವಣಿಗೆಗೆ ಮೆರಗು ನೀಡಿತು. ಗೋ ಮಂದಿರದ ಭಕ್ತಿ ಭೂಷಣ್ ಪ್ರಭುಜಿ, ವೃಂದಾವನದ ರಮೇಶ್ ಗೊಸ್ವಾಮಿ, ಬ್ರಿಜೇಶ್ ಗೋ ಸ್ವಾಮಿ, ಗೋ ಸೇವಾ ಗತಿ ವಿಧಿಯ ಪ್ರವೀಣ ಸರಳಾಯ,ಉತ್ಸವ ಸಮಿತಿಯ ಗೌರವಧ್ಯಕ್ಷ ಐತಪ್ಪ ಆಳ್ವ ಸುಜಿರುಗುತ್ತು, ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಯಾಧ್ಯಕ್ಷ ತೇವು ತಾರಾನಾಥ ಕೊಟ್ಟಾರಿ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ಪುಂಚಮೆ, ಪ್ರ. ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಪ್ರಮುಖರಾದ ಕೃಷ್ಣ ಕುಮಾರ್ ಪೂಂಜ, ರವೀಂದ್ರ ಕಂಬಳಿ, ರಾಮದಾಸ ಬಂಟ್ವಾಳ, ಗಣೇಶ ಸುವರ್ಣ ತುಂಬೆ, ಅನಿಲ್ ಪಂಡಿತ್, ಪಿ. ಸುಬ್ರಮಣ್ಯ ರಾವ್, ನವೀನ ಚಾಪೆ, ವಿನಯ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು