5:20 AM Wednesday6 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ: ಮಾಜಿ ಸಚಿವ ರಮಾನಾಥ ರೈ

19/11/2023, 22:27

ಮಂಗಳೂರು(reporterjarnataka.com): ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.


ಭಾನುವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಬಳಿಕ ಅವರು ಮಾತನಾಡಿದರು.
ಇಂದಿರಾ ಗಾಂಧಿ ಅವರು ದೇಶದ ಏಕತೆಗಾಗಿ ಬಲಿದಾನವಾದ ಮಹಿಳೆ. ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಗೊಳಿಗೊಳಿಸಬೇಕಾದ ಅನಿವಾರ್ಯ ಎದುರಾಯಿತು. ಆದರೆ ಇದರಿಂದ ಬಡವರಿಗೆ ಅನುಕೂಲವಾಗಿದೆ ಹೊರತು ಅನಾನುಕೂಲವಾಗಿಲ್ಲ. ಬಡತನ ನಿರ್ಮೂಲನೆ ಕಾರ್ಯಕ್ರಮದ ಮೂಲಕ ಜನರು ಆರ್ಥಿಕವಾಗಿ ಮೇಲಕ್ಕೆತ್ತುವ ಕೆಲಸ ಮಾಡಿದ್ದರು. ತುರ್ತುಪರಿಸ್ಥಿತಿಯ ಅಧಿಕಾರಿದ ಹಿನ್ನೆಲೆಯಲ್ಲಿ ಭೂ ಮಸೂದೆ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಲು ಸಾಧ್ಯವಾಯಿತು. ಬಡವರಿಗೆ ಯೋಗ್ಯವಾಗುವ ಯೋಜನೆಗಳನ್ನು ಜಾರಿಗೊಳಿಸಿದ ನಂತರ ತುರ್ತುಪರಿಸ್ಥಿತಿಯನ್ನು ಸ್ವತಃ ಹಿಂಪಡೆದರು. ಅವರು ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ‌ ಜನರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿದರು. 20 ಅಂಶದ ಆರ್ಥಿಕ ಕಾರ್ಯಕ್ರಮದ ಹೆಚ್ಚಿನ ಫಲಾನುಭವಿಗಳು ದ.ಕ.ಜಿಲ್ಲೆಯಲ್ಲಿದ್ದಾರೆ ಎಂದು ನೆನಪಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಪದ್ಮರಾಜ್, ಸಂತೋಷ್ ಕುಮಾರ್ ಶೆಟ್ಟಿ, ಲುಕ್ಮಾನ್ ಬಂಟ್ವಾಳ್, ಜೆ.ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ದಾಸ್, ಬಿ.ಎಂ. ಅಬ್ಬಾಸ್ ಅಲಿ, ನೀರಜ್ ಚಂದ್ರ ಪಾಲ್, ಕೆ.ಹರಿನಾಥ್, ಶುಭೋದಯ ಆಳ್ವ, ಮಂಜುಳಾ ನಾಯಕ್, ಚೇತನ್ ಬೆಂಗ್ರೆ, ಮುಹಮ್ಮದ್ ಕುಂಜತ್ತಬೈಲ್, ಟಿ.ಕೆ. ಸುಧೀರ್, ವಿಕಾಸ್ ಶೆಟ್ಟಿ, ಶಂಸುದ್ದೀನ್ ಬಂದರ್, ಲಕ್ಷ್ಮೀ ನಾಯರ್, ಪದ್ಮನಾಭ ಅಮೀನ್, ಹೈದರ್ ಬೋಳಾರ್, ದಿನೇಶ್ ಕುಂಪಾಲ, ಗಿರೀಶ್ ಶೆಟ್ಟಿ, ಚೇತನ್ ಕುಮಾರ್, ಆಸೀಫ್ ಬೆಂಗ್ರೆ, ವೆಂಕಪ್ಪ ಪೂಜಾರಿ, ಸೌಹಾನ್ ಎಸ್.ಕೆ. ಭಾಸ್ಕರ್ ರಾವ್, ಯೋಗೀಶ್ ನಾಯಕ್, ದಿನೇಶ್ ಪಾಂಡೇಶ್ವರ, ರಫೀಕ್ ಕಣ್ಣೂರ್, ನೀತ್ ಶರಣ್, ಸಲೀಂ ಕುದ್ರೋಳಿ ಉಪಸ್ಥಿತರಿದ್ದರು.
ಮಾಜಿ ಮೇಯರ್ ಶಶಿಧರ ಹೆಗ್ಡೆ ಸ್ವಾಗತಿಸಿದರು. ಸೇವಾದಳ ಜಿಲ್ಲಾ ಮುಖ್ಯಸ್ಥ ಜೋಕಿಂ ಡಿಸೋಜ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು