5:38 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ

20/11/2023, 16:52

ಮೋಹನ್ ನಂಜನಗೂಡು ಮೈಸೂರು

info.reeporterkarnataka@gmail.com

ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಯುವಕ ಸಿದ್ದರಾಜು(35) ಎಂಬುವವರೆ ಮೃತ ದುರ್ದೈವಿ.


ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಮೃತ ಸಿದ್ದರಾಜು ಅವರ ಪಿತ್ರಾರ್ಜಿತ ಆಸ್ತಿಯನ್ನು ಕೆಐಎಡಿಬಿ ವಶಪಡಿಸಿಕೊಂಡು ಅದನ್ನು
ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿಗೆ ಹಂಚಿಕೆ ಮಾಡಿತ್ತು.
ಆದರೆ ಕೆಐಎಡಿಬಿ ಪ್ರಕಾರ ಭೂಮಿ ಕಳೆದುಕೊಂಡ ರೈತ ಅಥವಾ ರೈತ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂಬ ನಿಯಮವಿದ್ದರೂ ಮೃತ ರೈತನ ಕುಟುಂಬಕ್ಕೆ ಕೆಐಎಡಿಬಿ ಯಾಗಲಿ ಅಥವ ರೈತರ ಜಮೀನಿನಲ್ಲಿ ಕಾರ್ಖಾನೆ ನಡೆಸುತ್ತಿರುವ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿ ಯಾಗಲಿ ಮಾನವೀಯತೆ ದೃಷ್ಟಿಯಿಂದಲಾದರು ಉದ್ಯೋಗ ನೀಡದೆ ಇರುವುದು ಘಟನೆಗೆ ಕಾರಣವೆನ್ನಲಾಗಿದೆ.
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕಾರ್ಖಾನೆ ಮುಂದೆ ಹಸಿರು ಸೇನೆ ಹಾಗೂ ರೈತ ಸಂಘಟನೆ ಗಳು ಕಳೆದ 45 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಗಳನ್ನು ಸಹ ಹಮ್ಮಿಕೊಂಡಿದ್ದವು. ಆದರೂ ಉದ್ಯೋಗ ನೀಡದ ಕೆಐಎಡಿಬಿ ಹಾಗೂ ಕಾರ್ಖಾನೆಯಿಂದ ಮನನೊಂದ ರೈತ ಸಿದ್ದರಾಜು ಡೆಟ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ‌.
ಮೃತನ ಪತ್ನಿ ರಕ್ಷಿತಾ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಘಟನೆಯ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕೆಐಎಡಿಬಿ ಹಾಗೂ ಕಾರ್ಖಾನೆ ಯವರ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು