3:46 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು