1:15 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯ‌ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

09/12/2023, 12:16

ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಬಾಲವಿಕಾಸ ಶಾಲೆಯು ಇದೀಗ ಎಲ್ಲಾ ಸೌಕರ್ಯಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ವಿಸ್ತಾರವಾದ ಆಟದ ಮೈದಾನವನ್ನು ಹೊಂದಿದ್ದು ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ‌, ಶಾಲಾ ವಿದ್ಯಾರ್ಥಿಗಳು ಈ ಸೌಕರ್ಯಗಳನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರು”ಇಂದಿನ ಮಕ್ಕಳಿಗೆ ವ್ಯಾಯಾಮದ ಅಗತ್ಯವಿದೆ, ಅದು ಕ್ರೀಡೆಯಲ್ಲಿ ದೊರೆಯುತ್ತದೆ.ಶಿಕ್ಷಣ ಎಂದರೆ ಕೇವಲ‌ ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಪ್ರತಿಭೆಯ ಅನ್ವೇಷಣೆಯೂ ಶಿಕ್ಷಣವಾಗಿದೆ”ಎಂದರು. ಕ್ರೀಡೋತ್ಸವದಲ್ಲಿ ಕ್ರೀಡಾ ಜ್ಯೋತಿಯ ಆಗಮನ ಹಾಗೂ ಆಕರ್ಷಣೀಯ ಪಥಸಂಚಲನವು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕಿ ಮೋಹಿನಿ ಎ. ರೈ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ರಶ್ಮಿ ಫೆರ್ನಾಂಡಿಸ್ ಹಾಗೂ ಯಜ್ಞೇಶ್ವರಿ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು