4:01 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವ: 18 ಮೆಟ್ಟಿಲುಗಳ ಪಡಿ ಪೂಜೆ

18/12/2023, 22:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು.


ಶ್ರೀ ಕ್ಷೇತ್ರ ಶಬರಿಮಲೆಯ ಮಾದರಿಯಲ್ಲೇ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದ ಗುರುಸ್ವಾಮಿಗಳಾದ ದೇವರಾಜ ಸ್ವಾಮಿಗಳ ನೇತೃತ್ವದಲ್ಲಿ ಪಡಿ ಪೂಜೆ ನಡೆಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳೂ ಸೇರಿದಂತೆ ದೇವಾಲಯವನ್ನು ವಿವಿಧ ಬಗೆಯ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಳಿಕ ಚೆಂಡೆ ಮೇಳದೊಂದಿಗೆ ಶ್ರೀ ಕ್ಷೇತ್ರ ಶಬರಿಮಲೆಯ ಅರ್ಚಕರಿಂದ ಪವಿತ್ರ 18 ಮೆಟ್ಟಿಲುಗಳಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪವಿತ್ರ ಮೆಟ್ಟಿಲುಗಳನ್ನು ಶುದ್ದಿ ಗೊಳಿಸಲಾಯಿತು. ನಂತರ ಮೆಟ್ಟಿಲುಗಳಿಗೆ ಇಡುಗಾಯಿ ಒಡೆದು ಕರ್ಪೂರ ಹಚ್ಚಿ ಪುಷ್ಪಾರ್ಚನೆ ಮಾಡುವ ಮೂಲಕ ಅಯ್ಯಪ್ಪನ ನಾಮಸ್ಮರಣೆಯೊಂದಿಗೆ ಗುರುಸ್ವಾಮಿಗಳು ಸೇರಿದಂತೆ ಅಯ್ಯಪ್ಪನ ಭಕ್ತರು 18 ಮೆಟ್ಟಿಲುಗಳನ್ನು ಹತ್ತಿ ಬಂದು ಶ್ರೀ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದು ಪುಳಕಿತರಾದರು.


ಶ್ರೀ ಸ್ವಾಮಿಗೆ ಮಹಾ ಮಂಗಳಾರತಿ ಸಲ್ಲಿಸಿ ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಪಟ್ಟಣವು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಸಾವಿರಾರು ಭಕ್ತರು ಪಡಿ ಪೂಜಿಯಲ್ಲಿ ಭಾಗವಹಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯದ ಶಾಸ್ತ ಕಲಾ ಮಂಟಪದಲ್ಲಿ ನಂಜನಗೂಡಿನ ಸುರಭಿ ಗಾನ ಸಂಘದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯದ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು