11:00 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಕೆನರಾ ಎಕ್ಸ್ಪೋ -2023 ಉದ್ಘಾಟನೆ

23/12/2023, 19:55

ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ನಗರದ
ಕೊಡಿಯಾಲ್ ಬೈಲ್ ನ ಕೆನರಾ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಜನರಲ್ ಮ್ಯಾನೇಜರ್ ಸುಧಾಕರ್ ಕೊಠಾರಿ ಉದ್ಘಾಟನೆ ಮಾಡಿದರು. ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮಾವೇಶದ ಮುನ್ನ ದಿನ ಜರುಗಿದ ಈ ವಿಶಿಷ್ಟ ಪೂರ್ಣ ಕಾರ್ಯಕ್ರಮವು ಸಾರ್ವಜನಿಕರ ಮನಸೆಳೆಯಿತು. ಕೆನರಾ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪೂರೈಸಿ, ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡ ಹಳೆ ವಿದ್ಯಾರ್ಥಿಗಳಿಗೆ ತಮ್ಮ ನಾವಿನ್ಯತೆ, ಸೃಜನಶೀಲತೆ, ಕೌಶಲಗಳನ್ನು ಅನಾವರಣಗೊಳಿಸಲು ಹಾಗೂ ಮತ್ತೊಮ್ಮೆ ವಿದ್ಯಾಸಂಸ್ಥೆಯೊಂದಿಗೆ ತಮ್ಮ ಸಂಬಂಧಗಳನ್ನು ನವೀಕರಿಸಲು ಈ ಕಾರ್ಯಕ್ರಮವು ಅತ್ಯುತ್ತಮ ವೇದಿಕೆಯಾಗಿ ರೂಪುಗೊಂಡಿತು. ಕೇಂದ್ರ ಸರ್ಕಾರವು ಉತ್ತೇಜಿಸಿದ ಸ್ಟಾರ್ಟ್ ಅಪ್ ಆಲೋಚನೆಗಳಿಗೆ ಯೋಜನೆಯ ರೂಪ ಕೊಟ್ಟು ತಯಾರಿಸಿದ ವಿವಿಧ ಪ್ರಾಜೆಕ್ಟ್ ಗಳು, ವೈವಿಧ್ಯಪೂರ್ಣ ಆಹಾರ ವಿಚಾರಗಳು ಈ ಕಾರ್ಯಕ್ರಮದಲ್ಲಿ ಕಂಡು ಬಂದವು. ಎಲೆಕ್ಟ್ರಿಕ್ ತ್ರಿ ಚಕ್ರ ಹೊಸ ವಿನ್ಯಾಸ ವಾಹನಗಳ ಮಾದರಿ, ಪುಸ್ತಕಮಳಿಗೆ, ವಿವಿಧ ಪಾನಿಯ ಆಹಾರ ವಿವಿಧ ವಿನ್ಯಾಸದ ಕೆನರಾ ಬ್ರಾಂಡ್ ನ ಬಟ್ಟೆ, ಪೈ ದ್ವಿ ಚಕ್ರ ಶೋರೂಂ,ಕೆನರಾ ಬ್ಯಾಂಕ್, ಪೀಠೋಪಕರಣ, ಎಸ್ ಕೆ ಟ್ರೇಡರ್ಸ್, ಅಮೋಘ ಗಾರ್ಮೆಂಟ್ಸ್, ಡೇ ಟು ಡೇ ಡಿಜಿಟಲ್, ವೇದಾಮರೋಗ್ಯ, ಎಸ್ ಎಲ್ ಶೇಟ್ ಡೈಮಂಡ್ಸ್, ಫೋರ್ ಟೀಕ್ ಸೊಲ್ಯೂಷನ್ಸ್, ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ಸ್, ಶ್ರೇಯಸ್ ಸ್ವೀಟ್ಸ್, ಹೀಗೆ ಅನೇಕ ಪ್ರಮೋಷನ್ ಮಳಿಗೆಗಳು, ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಇದ್ದವು. ಸಂಜೆ ಹಳೆಯ ವಿದ್ಯಾರ್ಥಿಗಳಿಂದ ಕನ್ನಡ ಹಿಂದಿ ಹಳೆಯ, ಹೊಸ ಚಲನಚಿತ್ರ ಗೀತೆಗಳು ಹಾಗೂ ವಿವಿಧ ಹಾಡುಗಳು ಕರೋಕೆ ಮೀಟ್ ಕಾರ್ಯಕ್ರಮವು ನಡೆಯಿತು.


ಕೆನರಾ ಆಡಳಿತ ಮಂಡಳಿಯ ಕಾರ್ಯದರ್ಶಿ ರಂಗನಾಥ ಭಟ್, ಜಂಟಿ ಕಾರ್ಯದರ್ಶಿಗಳಾದ ಸುರೇಶ್ ಕಾಮತ್ ಹಾಗೂ ಗೋಪಾಲಕೃಷ್ಣ ಶೆಣೈ, ಕೆನರಾ ವಿಕಾಸ ಕಾಲೇಜಿನ ಸಂಯೋಜಕರಾದ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ಪದವಿ ಕಾಲೇಜಿನ ಮ್ಯಾನೇಜರ್ ಶಿವಾನಂದ ಶೆಣೈ, ಆಡಳಿತ ಮಂಡಳಿಯ ಸದಸ್ಯರಾದ ನರೇಶ್ ಶೆಣೈ, ಅಶ್ವಿನಿ ಶೆಣೈ, ಕೆನರಾ ಆಂಗ್ಲ ಪ್ರಾಥಮಿಕ ಶಾಲೆ ಹಾಗೂ ಕೆನರಾ ಹೈಸ್ಕೂಲ್ ಉರ್ವಾ ಇಲ್ಲಿಯ ಮ್ಯಾನೇಜರ್ ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ಡಾ. ದೀಪ್ತಿ ನಾಯಕ್, ಪಿ ಆರ್ ಓ ಉಜ್ವಲ್ ಮಲ್ಯ, ಸಮ್ಮಿಲನದ ಉಸ್ತುವಾರಿ ಗೋಪಾಲಕೃಷ್ಣ ಶೆಟ್ಟಿ,ಕೆನರಾ ಸಹೋದರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ,ಸಂಸ್ಥೆಯ ಹಳೆಯ ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಹಭಾಗಿಗಳಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು