11:00 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು