6:19 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ

02/01/2024, 21:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದರು.


ನಂಜನಗೂಡು ನಗರದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಹುಣ್ಣಿಮೆಯಂದು ಅಂಧಕಾಸುರನ ಸಂಹಾರ ನಡೆಯುತ್ತದೆ. ಅಂಧಾಕಾಸುರ ಸಂಹಾರದ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ, ನಂಜುಂಡೇಶ್ವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದು 4 – 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4 ರ ಗುರುವಾರ ಸ್ವಯಂ ಪ್ರೇರಿತರವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರ ಮಾಡಬೇಕಾದ ಅನಿವಾರ್ಯತೆ ಬಂದಿದೆ.
ಅದಕ್ಕಾಗಿ ತಾವೆಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ದಕ್ಷಿಣ ಕಾಶಿಯ ನಂಜುಂಡೇಶ್ವರನಿಗೆ ಎಂಜಲು ಎರಚಿದವರ ಶಿಕ್ಷೆಗೆ ಈ ಮೂಲಕ ಆಗ್ರಹಿಸ ಬೇಕೆಂದು ಕೋರಿಕೊಳ್ಳುತ್ತೆವೆ ಎಂದು ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ನಗರಸಭಾ ಸದಸ್ಯ ಕಪಿಲೇಶ್, ಖಾದಿ ಗ್ರಾಮೋದ್ಯೋಗ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು