4:34 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್

03/01/2024, 22:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಾವಿತ್ರಿ ಬಾ ಪುಲೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಟ ನಡೆಸಿದ ಸಾವಿತ್ರಿ ಬಾ ಪುಲೆರವರು, ಇಂದಿಗೂ ಎಂದೆಂದಿಗೂ ಸ್ಪೂರ್ತಿದಾಯಕರಾದವರು ಎಂದು ಶಾಸಕರು ನುಡಿದರು.
ಕೂಡ್ಲಿಗಿ ಕ್ಷೇತ್ರದ  ಗುಣಮಟ್ಟದ ಶಿಕ್ಷಣಕ್ಕಾಗಿ,ಪ್ರತಿಯೊಬ್ಬರು ಪತ್ರ ಬರೆಯುವ ಮೂಲಕ  ಅನೇಕ ಸಲಹೆ ಮತ್ತು ಸೂಚನೆ ನೀಡುತ್ತಿರುವುದು ಸಂತಸ  ತಂದಿದೆ ಎಂದರು. 
ಸಾವಿತ್ರಿ ಬಾ ಪುಲೆ ಅವರ ಪ್ರಶಸ್ತಿಗೆ ಪಾತ್ರರಾಗಿರುವ ಗುರು ಮಾತೆಯರು ಹಾಗೂ ಶಿಕ್ಷಕಿಯರು, ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ  ಸೇವೆ ಸಲ್ಲಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಮತ್ತು ಅವರೆಲ್ಲರಿಗೂ ಶಾಸಕರು ಅಭಿನಂಧನೆಗಳನ್ನು ತಿಳಿಸಿದರು. ನಂತರ ಸಂಘದ  ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಮಾನಗಳಲ್ಲಿ ಅವೆಲ್ಲವುಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಗಣನೀಯ ಸೇವೆಸಲ್ಲಿಸಿದ ಹಾಗೂ ನಿವೃತ್ತ ಶಿಕ್ಷಕಿಯರನ್ನು, ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಹಶಿಲ್ದಾರರಾದ ಎಮ್.ರೇಣುಕಮ್ಮ ಸೇರಿದಂತೆ, ತಾಲೂಕು ಮಟ್ಟದ ವಿವಿದ ಇಲಾಖೆಗಳ ಅಧಿಕಾರಿಗಳು ಸಾವಿತ್ರಿ ಬಾಯಿ ಪುಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಶಿಕ್ಷಕ ಶಿಕ್ಷಕಿಯರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು