5:37 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು