4:15 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ಪರಿಸರಕ್ಕಾಗಿ ನಾವು; ದ. ಕ. ಮತ್ತು ಉಡುಪಿ ಜಿಲ್ಲಾ ಘಟಕದ ಮೊದಲ ಸಭೆ, ಉಪ ಘಟಕಗಳ ರಚನೆ

18/01/2024, 10:32

ಮಂಗಳೂರು(reporterkarnataka.com): ಅತಿಯಾದ ಕೈಗಾರಿಕೀಕರಣ, ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ ವೈಪರೀತ್ಯದ ತುರ್ತು ಸಮಸ್ಯೆ ಎದುರಾಗಿದೆ. ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿಶ್ಚಿತ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ. ಈ ದಿಸೆಯಲ್ಲಿ ಪರಿಸರ ಪರ ಕೆಲಸ ಮಾಡಲು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಪರಿಸರ ಕಾರ್ಯಕರ್ತರನ್ನು ಒಗ್ಗೂಡಿಸಿ ರಾಜ್ಯ ಮಟ್ಟದ ಒಕ್ಕೂಟ ಕಟ್ಟಲು ‘ಪರಿಸರಕ್ಕಾಗಿ ನಾವು’ ಎನ್ನುವ ರಾಜ್ಯ ಮಟ್ಟದ ಬಳಗ ರಚನೆಯಾಗಿದೆ. ಜೊತೆಗೆ ಪ್ರತಿ ಜಿಲ್ಲೆಯಲ್ಲೂ ಅದರ ಉಪಘಟಕ ರಚಿಸಲಾಗಿದೆ.

ಪರಿಸರಕ್ಕಾಗಿ ನಾವು – ಇದರ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸಂಯುಕ್ತ ಘಟಕದ ಮೊದಲ ಸಭೆ ಜನವರಿ 15, 2024 ರಂದು ಕಿನ್ನಿಗೋಳಿಯ ನೇಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.
ದ.ಕ. ಜಿಲ್ಲೆಯಿಂದ ಅಶ್ವಿನಿ ಭಟ್ ಮತ್ತು ಭುವನ್ ದೇವಾಡಿಗ ಹಾಗೂ ಉಡುಪಿ ಜಿಲ್ಲೆಯಿಂದ ಶ್ರೀ ಕುಮಾರ್ ಮತ್ತು ದೀಪ್ತಿ ಅವರು ರಾಜ್ಯ ಸಂಚಾಲನ ಸಮಿತಿಗೆ ಈಗಾಗಲೇ ಆಯ್ಕೆ ಆಗಿದ್ದಾರೆ.ಪರಿಸರಕ್ಕಾಗಿ ನಾವು ರಾಜ್ಯ ಬಳಗದ ಆರಂಭಿಕ ಸಮಿತಿಯ ಪರವಾಗಿ ಮಮತಾ ರೈ ಹಾಗೂ ಉಭಯ ಜಿಲ್ಲೆಗಳ ಅನೇಕ ಪ್ರಮುಖ ಪರಿಸರ ಕಾರ್ಯಕರ್ತರು ಉಪಸ್ಥಿತರಿದ್ದರು.
ಹವಾಗುಣ ವೈಪರೀತ್ಯ ದಿಂದ ಹಿಡಿದು ಉಭಯ ಜಿಲ್ಲೆಗಳನ್ನು ಕಾಡುತ್ತಿರುವ ಅತಿ ಮುಖ್ಯ ಪರಿಸರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಆಯ್ದ ಪರಿಸರ ಸಮಸ್ಯೆಗಳ ಪರಿಹಾರಕ್ಕಾಗಿ ಆಯಾ ಕ್ಷೇತ್ರದ ಪರಿಣಿತರನ್ನು ಒಳಗೊಂಡ ಸಮಿತಿಗಳನ್ನು ರಚಿಸಿ ಕಾರ್ಯತಂತ್ರ ರೂಪಿಸಲು, ಜನರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಯೋಜನೆಗಳನ್ನು ರೂಪಿಸಲು ಹಾಗೂ ರಾಜ್ಯ ಮಟ್ಟದ “ಪರಿಸರಕ್ಕಾಗಿ ನಾವು ” ಬಳಗದ ಮಾರ್ಗದರ್ಶನದಂತೆ ಕೆಲಸ ಮಾಡಲು ನಿರ್ಧರಿಸಲಾಯಿತು. ಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಪರಿಸರಕ್ಕಾಗಿ ದುಡಿಯುತ್ತಿರುವ 38 ಮಂದಿ ಸೇರಿದ್ದರು. ಅಪರಾಹ್ನ 2.40ಕ್ಕೆ ಎಲ್ಲರನ್ನೂ ಸ್ವಾಗತಿಸುವ ಮೂಲಕ ಶ್ರೀಕುಮಾರ್ ಅವರು ಸಭೆಯನ್ನು ಪ್ರಾರಂಭಿಸಿದರು. ಸರೋಜಾ ಪ್ರಕಾಶ್ ಹಾಗೂ ಅಶ್ವಿನಿ ಭಟ್ ಸೇರಿ ” ಎಲ್ಲರ ನೋವನು ಬಲ್ಲವನಾದರೆ” ಹಾಡನ್ನು ಹಾಡಿದರು ಹಾಗೂ ಉಳಿದವರು ಅವರೊಂದಿಗೆ ದನಿಗೂಡಿಸಿದರು. ಸಮಸ್ಯೆಗಳನ್ನು ಈ ಕೆಳಗಿನ ಕ್ಷೇತ್ರಗಳಿಗೆ ಅನುಗುಣವಾಗಿ ವಿಂಗಡಿಸಲಾಯಿತು.
1. ಮೇಲ್ಮೈ ನೀರು ( ನದಿ,ಕೆರೆ, ಸಮುದ್ರ)
2. ಅಂತರ್ಜಲ
3. ತ್ಯಾಜ್ಯ ನಿರ್ವಹಣೆ
4. ಅಭಿವೃದ್ಧಿಯ ಹೆಸರಿನಲ್ಲಿ ಮರ ಕಡಿಯುವುದು, ಅರಣ್ಯಗಳ ನಾಶ
5. ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ
6. ಶಿಕ್ಷಣ, ಜೀವನಶೈಲಿ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು
7. ಕೃಷಿ ಮತ್ತು ಜೀವ ಸಂಕುಲಗಳ ಮೇಲೆ ಆಗುತ್ತಿರುವ ಪರಿಣಾಮಗಳ ಅಧ್ಯಯನ
ಸದಸ್ಯರು ತಮ್ಮ ತಮ್ಮ ಆಸಕ್ತಿಯ ಪ್ರಕಾರ ಮೇಲಿನ ಕ್ಷೇತ್ರಗಳಲ್ಲಿ ಕೆಲಸ ಮಾಡುವ ತಂಡಗಳನ್ನು ಸೇರಿಕೊಳ್ಳಬೇಕೆಂದು ನಿರ್ಧರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು