ಇತ್ತೀಚಿನ ಸುದ್ದಿ
ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ
20/01/2024, 10:40
ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ ಕುಲಕರ್ಣಿ
ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆಯ ಒ ಬಿ ಜಿ ವಿಭಾಗದ
ಡಾ. ವಿದ್ಯಾಶ್ರೀ ಕಾಮತ್ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದರು.
ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ,ಕೌನ್ಸಿಲರ್ ಸುಮನ ಪಿಂಟೋ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗರ್ಭ ವ್ಯವಸ್ಥೆ ಯಲ್ಲಿ ವಿಚಾಲಿತರಾಗದೆ ಒತ್ತಡ ರಹಿತವಾಗಿ ಕರ್ತವ್ಯ ನಿಭಾಸಿಕೊಳ್ಳಬೇಕು. ಮಾನಸಿಕ ಒತ್ತಡಗಳಿಗೆ ಬಲಿಯಾಗದೆ, ಅರಾಮವಾಗಿ ಮನಸ್ಸನ್ನು ಹತೋಟಿಯಲ್ಲಿಕೊಳ್ಳಬೇಕು.. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ.. ಕೆಲವು ಅಗತ್ಯ ಕ್ರಮಗಳನ್ನು ಪಾಲಿಸಿ, ಹೆಚ್ಚಿನ ಸಮಯ ನಿಂತುಕೊಂಡು ಕರ್ತವ್ಯ ನಿರ್ವಹಿಸದೆ, ಸರಿಯಾದ ನಿದ್ರೆ, ಯೋಗ ಧ್ಯಾನದಲ್ಲಿ ತೊಡಗಿಕೊಳ್ಳುವುದು ಉತ್ತಮ ಎಂದು ಅವರು ಕಾರ್ಯಗಾರದಲ್ಲಿ ಕಿವಿ ಮಾತು ಹೇಳಿದರು.
ಪಿಎಸ್ಐ ಅನಿತಾ ಸ್ವಾಗತಿದರು. ನಗರ ಪೊಲೀಸ್ ಕಚೇರಿಯ ಯೋಗ ಕ್ಷೇಮಾಧಿಕಾರಿ ಸುಶ್ಮಿತಾ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.
ನಗರ ವ್ಯಾಪ್ತಿಯ ವಿವಿಧ ಠಾಣಾ ಮಹಿಳಾ ಪೊಲೀಸ್ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.