ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆ ಮೇಲೆ ದಾಳಿ ಯತ್ನ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
23/01/2024, 23:15
ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮುಂತಾದವರು
ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್,
ರಕ್ಸಿತ್ ಶಿವರಾಮ್, ಶಾಲೆಟ್ ಪಿಂಟೋ, ಸಾಹುಲ್ ಹಮೀದ್, ವಿಸ್ವಾಶ್ ದಾಸ್, ವಸಂತ್ ಬೆರ್ನಾಡ್, ಲುಕ್ಮನ್ ಬಂಟ್ವಾಳ್, ಬೇಬಿ ಕುಂದರ್, ಆರ್. ಕೆ. ಪ್ರಥ್ವಿರಾಜ್, ಮೋಹನ್ ಕೋಟಿಯನ್, ಪ್ರಕಾಶ್ ಸಾಲಿಯಾನ್, ಸುರೇಂದ್ರ ಕಂಬ್ಳಿ, ಜೆ ಅಬ್ದುಲ್ ಸಲೀಂ, ಪುರೊಸೋತಮ ಚಿತ್ರಪುರ, ಪ್ರವೀಣ್ ಚಂದ್ರ ಆಳ್ವ, ಅಪ್ಪಿ, ಗಿರೀಶ್ ಆಳ್ವ, ಮಂಜುಳಾ ನಾಯಕ್, ಜಸಿಂತ ಅಲ್ಫ್ರೆಡ ಮೊದಲದವರು ಉಪಸ್ಥಿತರಿದ್ದರು