11:12 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ಪುನ‌ರ್ ನವೀಕರಣಗೊಂಡ ಚಿತ್ರಾಪುರ ದೇಗುಲ ಸರೋವರ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

27/01/2024, 22:58

ಚಿತ್ರಾಪುರ(reporterkarnataka.com): ಭವಿಷ್ಯದಲ್ಲಿ ಭಾರೀ ನೀರಿನ ಕ್ಷಾಮ ತಲೆದೋರದಂತೆ ಮಾಡಲು ಕೆರೆ, ಸರೋವರಗಳು ಜಲಸಂರಕ್ಷಣೆಗೆ ಪೂರಕವಾಗಿದ್ದು, ಇದರ ಜೀರ್ಣೋದ್ಧಾರ, ನವೀಕರಣ ಕಾರ್ಯಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದರು.
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರೋವರವನ್ನು 1 ಕೋಟಿ ರೂ. ವೆಚ್ಚದಲ್ಲಿ ಪುನ‌ರ್ ನವೀಕರಣಗೊಳಿಸ ಲಾಗಿದ್ದು, ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಬಿಜೆಪಿ ಸರಕಾರ ಅಂತರ್ಜಲ ಸಂರಕ್ಷಣೆಗೆ ಒತ್ತು ನೀಡಿ ಕೆಲಸ ಮಾಡಿತ್ತು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಆರ್ಥಿಕ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಂಡು ಕೊಟ್ಯಂತರ ವೆಚ್ಚದಲ್ಲಿ ಹಲವು ಕೆರೆಗಳು ಇಂದು ಕಂಗೊಳಿಸುತ್ತಿವೆ. ಕೇವಲ ಲೇ ಔಟ್ ಮಾಡುವ ಕೆಲಸದಿಂದ ಪರಿಸರ ಸಹ್ಯ ಕೆಲಸಕ್ಕೂ ಮುಡಾವನ್ನು ಬಳಸಿಕೊಳ್ಳಲಾಗಿದೆ ಎಂದರು.


ಇದೇ ಸಂದರ್ಭ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ನಡೆದಿರು ವುದು ಕೋಟ್ಯಂತರ ರಾಮಭಕ್ತರ ಜೀವನವನ್ನು ಸಾರ್ಥಕ್ಯಗೊಳಿಸಿದೆ. ಭವಿಷ್ಯದಲ್ಲಿ ಪ್ರತಿಷ್ಠಾಪನೆಯ ದಿನ ಹಿಂದೂ ಸಮಾಜೋದ್ಧಾರಕ್ಕೆ ನಾವೆಲ್ಲಾ ಸಂಕಲ್ಪ ತೊಡಬೇಕಿದೆ ಎಂದರು.
ಕ್ಷೇತ್ರದ ಅನುವಂಶೀಯ ಆಡಳಿತ ಮೊತ್ತೇಸರರಾದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿಸರೋವರ ಸುಂದರವಾಗಿ ಮೂಡುವಲ್ಲಿಶಾಸಕರು ಅನು ದಾನ ಬಿಡುಗಡೆ ಮಾಡಿದ್ದಾರೆ.ಉತ್ತ ಮವಾಗಿ ಸ್ಪಂದಿಸಿದ್ದಾರೆ. ಇಂತಹ ಸತ್ಕಾರ್ಯ ಗಳಿಂದ ಸಮಾಜಕ್ಕೆ ಪ್ರಯೋಜನವಾಗುದರ ಜತೆಗೆ ಸದಾ ನೆನಪಿನಾಳದಲ್ಲಿ ಉಳಿಯುವ ಉತ್ತಮ ಕೆಲಸವಾಗಿದೆ ಎಂದು ಅವರು ನುಡಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲ ಉಮೇಶ್ ಟಿ. ಕರ್ಕೇರ,
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಸದಸ್ಯರಾದ ವೇದಾವತಿ, ಸುಮಿತ್ರ ಕರಿಯಾ, ಮುಡಾ ಆಯುಕ್ತ ಮನ್ಸೂ‌ರ್ ಆಲಿಖಾನ್, ಎಂಜಿನಿಯರ್ ಆರತಿ ಶೇಟ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್, ಕಲ್ಬಾವಿ ರಮೇಶ್ ರಾವ್, ಕನ್ಸಲೆಂಟ್ ಕೆ.ಪ್ರಕಾಶ್, ಅರ್ಚಕರಾದ ಕಾರ್ತಿಕ್ ಭಟ್, ಕೃಷ್ಣ ಶೆಟ್ಟಿ ಗುತ್ತಿಗೆದಾರ ಗೋಪಾಲ್ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಪ್ರಮುಖರಾದ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು ಹರೀಶ್ ಶೆಟ್ಟಿ ದೇವೀಪ್ರಸಾದ್ ಶೆಟ್ಟಿ ಸುರೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು