7:56 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು