2:37 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಆರದ ಎರಡು ಕೋಮುಗಳ ಸಂಘರ್ಷ: ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆ

06/02/2024, 18:42

*ಹಲ್ಲರೆ ಗ್ರಾಮದ ಎರಡು ಕೋಮುಗಳ ಸಂಘರ್ಷಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತದ ವೈಫಲ್ಯವೇ ಕಾರಣ ಪ್ರತಿಭಟನೆಯಲ್ಲಿ ಗಂಭೀರ ಆರೋಪ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ಘರ್ಷಣೆ ಪ್ರಕರಣ ಖಂಡಿಸಿ ತಾಲ್ಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಹಲ್ಲರೆ ಗ್ರಾಮದಲ್ಲಿ ನಡೆದ ಘಟನೆ ಖಂಡಿಸುತ್ತೇವೆ ಹಾಗೂ ನಾಯಕ ಜನಾಂಗದವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಿರಪರಾಧಿಗಳನ್ನು ಪೊಲೀಸರು ಕೂಡಲೇ ಬಿಡುಗಡೆ ಮಾಡಬೇಕು. ಗಲಾಟೆಗೆ ಪ್ರೇರೇಪಣೆ ನೀಡಿದವರನ್ನು ಕೂಡಲೇ ಬಂಧಿಸಬೇಕು. ಈ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಹಾಗೂ ಗ್ರಾಮದಲ್ಲಿ ಶಾಂತಿ ಸಭೆಯನ್ನು ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದರು. ನಂತರ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ನಂಜನಗೂಡಿನ ಡಿವೈಎಸ್ಪಿ ರಘು ರವರಿಂದ ಬಿಗಿ ಪೊಲೀಸ್ ಬಂದೋಬಸ್ತು ನೀಯೋಜನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ನಾಯಕ ಜನಾಂಗದ ಗೌರವಾಧ್ಯಕ್ಷ ಚಿಕ್ಕ ರಂಗನಾಯಕ,ತಾಲೂಕು ಅಧ್ಯಕ್ಷರಾದ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಖಜಾಂಚಿ ರಂಗಸ್ವಾಮಿ ಮುಖಂಡರಾದ ಹೆಡತಲೆ ನಾಗರಾಜು, ದೊರೆಸ್ವಾಮಿನಾಯಕ,ಕೆ ಡಿ ಮಂಜು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧ್ಯಕ್ಷ ರಾಮಚಂದ್ರು, ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಕಾಟೂರು ದೇವರಾಜ್ ಶಿವನಂಜನಾಯ್ಕ, ಶಿವಣ್ಣ, ಮಹಾದೇವ ನಾಯಕ ಹಾಗೂ ಮಹಿಳೆಯರು ಸೇರಿದಂತೆ ಸಾವಿರಾರು ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು