2:43 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸುತ್ತೂರು ಜಾತ್ರೆ: ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 120 ಜೋಡಿಗಳು

07/02/2024, 17:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲು ಎಂಬಂತೆ ಇಂದು ನಡೆದ ಎರಡನೇ ದಿನದ ಸುತ್ತೂರು ಜಾತ್ರೆಯಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಸುಮಾರು 120 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.
ಸುತ್ತೂರು ಶ್ರೀ ಕ್ಷೇತ್ರದ ಪರಮಪೂಜ್ಯಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಹಾಗೂ ವಿವಿಧ ಮಠಾಧೀಶರ ದಿವ್ಯಸಾನಿಧ್ಯದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 120 ಜೋಡಿಗಳು ಸತಿಪತಿಗಳಾದರು.
ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ವಿವಿಧಡೆಯಿಂದ ಬಂದ 120 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದರು.
120 ಜೋಡಿಗಳ ಪೈಕಿ ನಾಲ್ಕು ವೀರಶೈವ ಲಿಂಗಾಯತ, 61 ಪರಿಶಿಷ್ಟ ಜಾತಿ, 26 ಪರಿಶಿಷ್ಟ ಪಂಗಡ, 18 ಹಿಂದುಳಿದ ವರ್ಗ 11 ಅಂತರ್ಜಾತಿ ಜೋಡಿಗಳು ವಿವಾಹದಲ್ಲಿ ಪಾಲ್ಗೊಂಡಿದ್ದರು.
ಅದರಲ್ಲಿ ತಮಿಳುನಾಡಿನ 23 ಜೋಡಿಗಳು, ನಾಲ್ಕು ಜೋಡಿ ವಿಶೇಷ ಚೇತನರು, ಮತ್ತು ಒಂದು ಮರು ಮದುವೆಯ ಜೋಡಿಗಳು ಎಲ್ಲರ ಗಮನ ಸೆಳೆದವು.
ವೇದಿಕೆ ಮೇಲಿನ ಎಲ್ಲಾ ವರರಿಗೆ ಶ್ರೀಗಳು ಸೇರಿದಂತೆ ಹಲವು ಗಣ್ಯರು, ಮಾಂಗಲ್ಯ ಮತ್ತು ಕಾಲುಂಗುರ ವಿತರಣೆ ಮಾಡಿದರು. ನಂತರ ಗಟ್ಟಿಮೇಳ ಹಾಗೂ ಮಂತ್ರ ಘೋಷಗಳೊಂದಿಗೆ ಮಾಂಗಲ್ಯ ಧಾರಣೆ ನಡೆಯಿತು.
ಈ ಸಂದರ್ಭ ಶ್ರೀಗಳು ಸೇರಿದಂತೆ ವೇದಿಕೆ ಮೇಲಿನ ಗಣ್ಯರು ಎಲ್ಲಾ ವಧು ವರರಿಗೆ ಮಂತ್ರಾಕ್ಷತೆ ಹಾಕುವ ಮೂಲಕ ಶುಭ ಹಾರೈಸಿದರು.
ನೂತನ ಸತಿಪತಿಗಳಾಗಿ ಸಹಬಾಳ್ವೆ ಹಾಗೂ ಉತ್ತಮ ಜೀವನ ರೂಪಿಸಿಕೊಳ್ಳುವುದಾಗಿ ಪ್ರತಿಜ್ಞಾವಿಧಿ ಸಲ್ಲಿಸಿದರು.
ಇದಕ್ಕೂ ಮುನ್ನ 120 ಜೋಡಿಗಳನ್ನು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಗದ್ದುಗೆಯಿಂದ ಹಲವು ಜಾನಪದ ಕಲಾತಂಡಗಳೊಂದಿಗೆ ಮದುವೆ ಮಂಟಪದ ವೇದಿಕೆಗೆ ಕರೆತರಲಾಯಿತು.


ವಧು ವರರಿಗೆ ಶ್ರೀಮಠದ ವತಿಯಿಂದ ತಾಳಿ ಬಟ್ಟೆ ಸೀರೆ ರವಿಕೆ ಗಳನ್ನು ಉಚಿತವಾಗಿ ನೀಡಲಾಗಿತ್ತು. ವಿವಾಹ ಮಹೋತ್ಸವಕ್ಕೆ ಬಂದಿದ್ದ ವಧು-ವರರು ಮತ್ತು ಅವರ ಜೊತೆ ಬಂದಿದ್ದ ಸಂಬಂಧಿಕರಿಗೆ ಊಟ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಅಕ್ಕ ಯುಎಸ್ ಎ ಅಧ್ಯಕ್ಷರಾದ ಅಕ್ಕ ಅಮರ್ ನಾಥ್ ಗೌಡ, ಹಾಗೂ ಮತ್ತಿತರ ಗಣ್ಯರು ಮಾತನಾಡಿ ಶ್ರೀ ಕ್ಷೇತ್ರದಲ್ಲಿ ನಡೆಯುವ ಜಾತ್ರೆ ಯು ವೈಶಿಷ್ಟ್ಯತೆ ಹಾಗೂ ಶ್ರೀಗಳವರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮೂಹಿಕ ವಿವಾಹದ ವೈಶಿಷ್ಟತೆಯ ಬಗ್ಗೆ ತಿಳಿಸಿದರು.
ಕಾಗಿನೆಲೆ ಶ್ರೀ ಕನಕ ಗುರು ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಹರಗುರು ಚರಮೂರ್ತಿಗಳು ಸೇರಿದಂತೆ ಉದ್ಯಮಿ, ಮೂಲ್ ಚಂದ್ ನಹರ್, ಯುಎಸ್ಎ ಮೆರಿಲ್ಯಾಂಡ್ ವೀರಪ್ಪನ್, ತಿರುವನಂತಪುರ ಶಾಂತಗಿರಿ ಆಶ್ರಮ ದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗುರು ರತ್ನಂ ಜ್ಞಾನಪಸ್ವಿ ಚುಂಚನಹಳ್ಳಿ ಮಠಾಧ್ಯಕ್ಷರಾದ ಶ್ರೀ ಚನ್ನಬಸವ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು