9:21 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು