4:35 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ತಾಲೂಕು ಅಧ್ಯಕ್ಷರ ನೇಮಕ‌ ವಿಚಾರ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ತಾಪಂ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

09/02/2024, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ
ಭುಗಿಲೆದ್ದಿದೆ. ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ತಾರಕ್ಕೇರಿದೆ.
ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಜಗಳ ಇದೀಗ ಬೀದಿಗೆ ಬಂದಿದೆ.
ತಾಲೂಕು ಅಧ್ಯಕ್ಷರ ಕಣದಲ್ಲಿ 12 ಜನ ಆಕಾಂಕ್ಷಿಗಳಿದ್ದರು.
ನೂತನ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದೆ.


ಮೂಡಿಗೆರೆ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರು ನೇಮಕದ ಆದೇಶ ಹೊರಡಿಸಿದ್ದಾರೆ.
ಈ ನಡುವೆ ತಾಲೂಕು ಪಂಚಾಯಿತಿ‌ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಹಲ್ಲೆ ನಡೆಸಲಾಗಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಹಲ್ಲೆ ನಡೆದಿದೆ.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ರಿಂದ ಹಲ್ಲೆ ಆರೋಪ.
ತೀವ್ರ ಹಲ್ಲೆಗೆ ಒಳಗಾಗಿರುವ ಕೆ.ಸಿ. ರತನ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು