12:03 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಚಿಂತೆಯ ಬದಲು ಚಿಂತನೆ ಮಾಡೋಣ: ಮೇಲ್ಕಾರಿನಲ್ಪಿ ಕೊಂಡೆವೂರು ಶ್ರೀಗಳು

12/02/2024, 13:49

ಬಂಟ್ವಾಳ(reporterkarnataka.com): ಹಿರಿಯರ ಅನುಭವವು ನಂಬಿಕೆಯ ಜೊತೆಗೆ ಮಿಳಿತವಾದಾಗ ಜೀವನವು ಅರ್ಥಪೂರ್ಣವಾಗುತ್ತದೆ. ಚಿಂತೆಯ ಬದಲು ಎಲ್ಲರೂ ಚಿಂತನೆಯನ್ನು ಮಾಡಬೇಕು. ಹಿರಿಯರ ಸೇವಾ ಪ್ರತಿಷ್ಠಾನ ನಡೆಸುವ ಕಾರ್ಯಗಳು ಸಮಾಜದ ಒಳಿತಿಗೆ ದೊಡ್ಡ ಕೊಡುಗೆಯಾಗಿದೆ. ಸಂಸ್ಕೃತಿಯ ರಕ್ಷಣೆಗೆ ಹಿರಿಯರ ಮಾರ್ಗದರ್ಶನವು ಅಗತ್ಯವಾಗಿದೆ ಎಂದು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ( ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಆಶ್ರಮದಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಆಶ್ರಮದ ಮೂಲಕ ಪರಿಸರದಲ್ಲಿ ಅನ್ನ ,ಅಕ್ಷರ, ಆಧಾರ ,ಆಶ್ರಯ ಮತ್ತು ಆರೋಗ್ಯ ಯೋಜನೆಯ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಪರಿಸರದಲ್ಲಿ ಹಿರಿಯರ ಸೇವಾ ಪ್ರತಿಷ್ಠಾದ ಘಟಕವನ್ನು ಆರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ತಾಲೂಕು ಘಟಕಗಳನ್ನು ಸಕ್ರಿಯಗೊಳಿಸುವುದರೊಂದಿಗೆ ಸಹಕಾರಿ ಸಂಘದ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಿ ಪ್ರತಿಷ್ಠಾನದ ಸದಸ್ಯರು ಪ್ರವರ್ತಕರಾಗಿ ಸಹಕರಿಸಬೇಕೆಂದು ತಿಳಿಸಿದರು.
ಡಾ.ಬಿ ಎನ್. ಮಹಾಲಿಂಗ ಭಟ್ ಕುಮಾರವ್ಯಾಸ ನಮನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ರಾಮಾಯಣದಲ್ಲಿ ಶ್ರೀರಾಮನ ಆದರ್ಶ ಗುಣಗಳ ಬಗ್ಗೆ ಮಾತನಾಡಿದರು.
ಪ್ರೊ. ವೇದವ್ಯಾಸ ರಾಮಕುಂಜ ಮಿರಾಕಲ್ ಹಣ್ಣಿನ ಮಹತ್ವದ ಬಗ್ಗೆ ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಾಂತಾಡಿ , ಸಮಿತಿಯ ಸದಸ್ಯರಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯಶಂಕರ ಪುಣಚ ಮತ್ತು ಸ್ಥಳೀಯ ಹಿರಿಯರು ಭಾಗವಹಿಸಿದ್ದರು.
ಸಮಿತಿಯ ಸದಸ್ಯ ಅನಾರು ಕೃಷ್ಣಶರ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಆಳ್ವ ಪಡುಮಲೆ ವಂದಿಸಿದರು.
ಬಳಿಕ ಆಶ್ರಮದ ಗೋಶಾಲೆ ಮತ್ತು ನಕ್ಷತ್ರವನವನ್ನು ಹಿರಿಯರು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು