5:36 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ

12/02/2024, 19:48

ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಸೈಂಟ್ ಜೆರೋಸ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ನೀಡಲಾಗುವುದು. ಈ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ.
ಜೆರೋಸ ಶಾಲೆಯ ಇತಿಹಾಸದಲ್ಲಿ ಯಾವುದೇ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ದಾಂತಗಳಿಗೆ ಬೆಲೆ ಕೊಟ್ಟು ಅವುಗಳಿಗೆ ಬದ್ದರಾಗಿ ಇರುತ್ತೇವೆ. ಮುಂದೆಯೂ ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರಾದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿ ಗಳ ಉತ್ತಮ ಭವಿಷ್ಯಕ್ಕೆ ಒಟ್ಟಾಗಿ ಶ್ರಮಿಸೋಣ ಎಂದು ಮುಖ್ಯ ಶಿಕ್ಷಕಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು