11:29 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ಧಿ ಸಂಭ್ರಮ: 22ರಂದು ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ; ಮಾತೃ ಸಂಗಮ

14/02/2024, 21:35

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ಧಿ ಸಂಭ್ರಮ ಪ್ರಯುಕ್ತ ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಫೆ.22ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಳಿಸಿದರು.


ಬುಧವಾರ ಶ್ರೀರಾಮ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಾಬ್ದಿ ಸಂಭ್ರಮ ಫೆ.21ರಿಂದ ಫೆ.24 ರವರೆಗೆ ಮಂದಿರದಲ್ಲಿ ನಡೆಯಲಿದೆ. ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಮಂದಿರದ ಮೇಲ್ಚಾವಣಿಯ ಉದ್ಘಾಟನೆ ಹಾಗೂ ಮಾತೃ ಸಂಗಮ‌ ಕಾರ್ಯಕ್ರಮ ನಡೆಯಲಿದೆ ಎಂದರು.
ಫೆ.21ರಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ತೀರ್ಥ ಕಲಶಗಳನ್ನು ಮಂದಿರಕ್ಕೆ ತರಲಾಗುತ್ತದೆ. ಶ್ರೀ ರಾಮ ವಿದ್ಯಾ ಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಮಂದಿರದ ಸುತ್ತಮುತ್ತಲಿನ ಭಾಗದಿಂದ ಆಗಮಿಸಿದ ಹೊರಕಾಣಿಕೆ ನರಹರಿ ಪರ್ವತ ಧ್ವಾರದಿಂದ ಮಂದಿರದವರೆಗೆ ವೈಭವ ಮೆರವಣಿಗೆ ಮೂಲಕ ಆಗಮನವನ್ನು ಸ್ವಾಗತಿಸಿಲಿದ್ದೇವೆ. ಸಂಜೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಡಾ. ಭಟ್ ವಿವರಿಸಿದರು.
ಫೆ. 22ರಂದು ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮಾಂಗಣ ಲೋಕಾರ್ಪಣೆ ಕಾರ್ಯಕ್ರಮ, ಫೆ.23ರಂದು ಮಾತೃ ಸಂಗಮ ಹಾಗೂ ಕುಂಕುಮಾರ್ಚನೆ, ಫೆ. 24 ರಂದು 13 ಕೋಟಿ ರಾಮನಾಮ ತಾರಕ ಜಪಯಜ್ಞ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಶತಾಬ್ದಿ ಸಂಭ್ರಮದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಹಿರಿಯರ ಪ್ರಕಾರ ಗಣಪತಿಯ ಇರುವಿಕೆಯು ಗೋಚರಕ್ಕೆ ಬಂದ ಹಿನ್ನೆಲೆಯಲ್ಲಿ ,ವಾಸ್ತು ತಜ್ಞರ ಸಲಹೆಯ ಮೇರೆಗೆ, ಪ್ರಶ್ನಾ ಚಿಂತನೆಯ ಪ್ರಕಾರ 6 ಅಡಿ 2 ಇಂಚು ಎತ್ತರದ ಗಣಪತಿ ವಿಗ್ರಹ ಪ್ರತಿಷ್ಟಾಪನೆ ಮಾಡಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ನಾರಾಯಣ ಸೋಮಯಾಜಿ, ಚೆನ್ನಪ್ಪ ಆರ್.ಕೋಟ್ಯಾನ್, ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಕಲ್ಲಡ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು