5:24 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು