2:30 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕಾರ್ಕಳ: 4 ತಾಸುಗಳಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನವನ್ನು ಮಂಜೂರು ಗೊಳಿಸಿದ  ಕಾರ್ಕಳ ತಹಶೀಲ್ದಾರ್

19/02/2024, 10:23

ಕಾರ್ಕಳ(reporterkarnataka.com): ಸರಕಾರದ ಸವಲತ್ತುಗಳನ್ನು ಪಡೆಯಲು ಸರಕಾರದ ಕಚೇರಿಗಳಲ್ಲಿ  ಪಲಾನುಭವಿಗಳು  ಅಲೆಯಬೇಕಾದ ಸ್ಥಿತಿ ಇರುವ ಇಂದಿನ  ಕಾಲದಲ್ಲಿ ಫಲಾನುಭವಿಯನ್ನು ಗುರುತಿಸಿ ಕೇವಲ 4 ಘಂಟೆಗಳಲ್ಲಿ ಪರಿಹಾರ ಸೂಚಿಸಿದ ವಿದ್ಯಮಾನವು ಕಾರ್ಕಳ ಜನತೆಯ ಮೆಚ್ಚುಗೆ ಗೆ ಪಾತ್ರವಾಗಿದೆ.
ಆಧಾರ್ ಕಾರ್ಡ್ ಮೊಬೈಲ್ ನಂಬರ್  ಲಿಂಕ್ ಮಾಡಲು ಬಂದ ವೃದ್ದೆ ಯೋರ್ವರ ಸಮಸ್ಯೆಯನ್ನು ಆಲಿಸಿ  ವೃದ್ದಾಪ್ಯ ವೇತನವನ್ನು ಕೇವಲ 4 ಗಂಟೆಗಳಲ್ಲಿ ಕಲ್ಪಿಸಿ ಕೊಟ್ಟಿದ್ದಾರೆ.
ಕಾರ್ಕಳ ತಹಶೀಲ್ದಾರ್ ನರಸಪ್ಪ ಕಚೇರಿಗೆ ಆಗಮಿಸುವ ವೇಳೆ 70ರ ಹರೆಯದ ಶೀಲಾ ಮಲೆಕುಡಿಯ ಅವರ ಸಮಸ್ಯೆ ಆಲಿಸಿದರು.
ಶೀಲಾ ಅವರು ಕಾರ್ಕಳ ತಾಲೂಕಿನ ಕೆರುವಾಶೆಯ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಒಬ್ಬಂಟಿ ಯಾಗಿದ್ದು, ಸರಕಾರದ ಯಾವುದೇ ಯೋಜನೆಯ ಫಲಾನುಭವಿಯಲ್ಲ. ರೇಷನ್ ಕಾರ್ಡ್ ಇದ್ದರೂ ಗೃಹಲಕ್ಷ್ಮಿ ಸೇರಿದಂತೆ ಯಾವ ಸವಲತ್ತುಗಳು ಸಿಕ್ಕಿಲ್ಲ. ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಇದನ್ನರಿತ ತಹಶೀಲ್ದಾರ್ ನರಸಪ್ಪ ತಕ್ಷಣಕ್ಕೆ  ಅಜೆಕಾರಿನ ನಾಡ ಕಚೇರಿ ಉಪತಹಶೀಲ್ದಾರ್ ವೃದ್ದಾಪ್ಯ ವೇತನವನ್ನು ಮಂಜೂರು ಮಾಡಬೇಕೆಂದು ಅಜೆಕಾರು ಉಪತಹಶಿಲ್ದಾರ್ ಗೆ  ಆದೇಶ ಹೊರಡಿಸಿದರು.
ಉಪ ತಹಶೀಲ್ದಾರ್ ನೇತೃತ್ವ:  ಅಜೆಕಾರು ನಾಡಕಚೇರಿಯ ಉಪ ತಹಶೀಲ್ದಾರ್ ನಮಿತಾ ಬಿ. ಅರ್ಜಿಯನ್ನು ಸಲ್ಲಿಸಿ ಅವರ ನೇತೃತ್ವದಲ್ಲಿ  ಶಿರ್ಲಾಲು ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಫಲಾನುಭವಿ ಶೀಲಾವರ ಖಾತೆ ತೆರೆಸಿ  ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಅನುಷಾ ಅವರಿಂದ ವಯಸ್ಸಿನ ದೃಢಪ್ರತಿ ಪಡೆದು
ಕೆರುವಾಶೆ ಗ್ರಾಮ ಆಡಳಿತಾಧಿಕಾರಿ ರವಿಚಂದ್ರ ಪಾಟೀಲ್  ಕಂದಾಯ ನಿರೀಕ್ಷ  ಮೊಹಮ್ಮದ್ ರಿಯಾಜ್  ಸಂಬಂಧಿತ ಎಲ್ಲಾ ವರದಿಗಳನ್ನು ತರಿಸಿ  ಉಪ ತಹಶೀಲ್ದಾರ್  ತಾಲೂಕು ತಹಶೀಲ್ದಾರ್ ಗೆ ಹಸ್ತಾಂತರಿಸಿದರು.
ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ಸಂಧ್ಯಾ ಸುರಕ್ಷಾ ಯೋಜನೆಯನ್ನು ಮಂಜೂರು ಗೊಳಿಸಿ  ಮಂಜೂರಾತಿ ಪತ್ರವನ್ನು ಶೀಲಾರವರಿಗೆ   ಹಸ್ತಾಂತರಿಸಿದರು.
ಶೀಲಾರವರ ಸುಮಾರು 22 ವರ್ಷಗಳಿಂದ ಖಾತೆ ಬದಲಾವಣೆಯಾಗಿರದ  ಪಹಣಿಯನ್ನು ಬದಲಾಯಿಸುವ ಬಗ್ಗೆ ಭರವಸೆ ನೀಡಿ,ಸಂಬಂಧಿತ ಇಲಾಖೆಗೆ ಮಾಹಿತಿ ನೀಡಿದರು.
ನರಸಪ್ಪ ತಹಶೀಲ್ದಾರ್  ರಾಯಚೂರು ಜಿಲ್ಲೆಯ ಸಿಂಧನೂರು ತಾಲುಕಿನ ಸಾಲಗುಂದ ಗ್ರಾಮದವರು.
ಕಾರ್ಕಳ ತಹಶೀಲ್ದಾರ್ 13 ವರ್ಷಗಳ ಕಾಲ ಶಿಕ್ಷಕರಾಗಿ, ಬಳಿಕ ಕೆಎಎಸ್ ಪರೀಕ್ಷೆ ಬರೆದು ಲಿಂಗಸೂರು ಪುರಸಭೆಯ ಮುಖ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸಿ ಬಳಿಕ ಕಾರ್ಕಳ ತಹಶಿಲ್ದಾರ್ ಆಗಿ ನಿಯೋಜನೆ ಗೊಂಡವರು.
ಸೇವೆ ಒದಗಿಸುವಲ್ಲಿ ಕರ್ನಾಟಕ ಬ್ಯಾಂಕ್  ಸಿಬ್ಬಂದಿಗಳಾದ ಗಾಯತ್ರಿ ಶೆಣೈ,  ಮುಖ್ಯ ಪ್ರಬಂಧಕ ಉದಯ ಶಂಕರ್ , ಅಜೆಕಾರು ನೆಮ್ಮದಿ ಕೇಂದ್ರದ ಸುರೇಂದ್ರ ನಾಯ್ಕ್  ,ಭೋಜೆಗೌಡ  ಸಹಕಾರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು